ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

Webdunia
ಸೋಮವಾರ, 13 ಜೂನ್ 2022 (08:11 IST)
ಪಾಟ್ನಾ : ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ.

ಆದರೆ ಇವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥರಲ್ಲ. ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. 

ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಅಂದಿನ ಬಿಹಾರದ ರಾಜ್ಯಪಾಲ ರಾಮನಾಥ ಕೋವಿಂದ್ ಹಾಗೂ ಬಿಹಾರದವರೇ ಆದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಈ ಪೈಕಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. 

ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾವಣೆಗಳಲ್ಲಿ ಸ್ಫರ್ಧಿಸುತ್ತಿದ್ದೂ ಸೋಲುತ್ತಲೇ ಇರುವುದರಿಂದ ಕೆಲವರು ಪ್ರಚಾರದ ಸಲುವಾಗಿಯೇ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಅಂಥವರ ಸಾಲಿಗೆ ಲಾಲೂ ಪ್ರಸಾದ್ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಯಾದವ್ ಸತತ ಒಂದಿಲ್ಲೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಲೇ ಇದ್ದಾರೆ.

ಇಷ್ಟಾದರೂ ಅವರು ಚುನಾವಣೆಯ ಆಸಕ್ತಿ ಕಳೆದುಕೊಂಡಿರಲಿಲ್ಲ. 2019ರ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದರು. ಆಗ ಸುಮಾರು 6 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments