Webdunia - Bharat's app for daily news and videos

Install App

ಭೂಕುಸಿತ ಪರಿಹಾರ ಪ್ಯಾಕೇಜ್‌ ಷರತ್ತಿನಿಂದ ಅನ್ಯಾಯವಾಗಿದೆ: ಪ್ರಿಯಾಂಕಾ ಗಾಂಧಿ

Sampriya
ಸೋಮವಾರ, 24 ಫೆಬ್ರವರಿ 2025 (20:39 IST)
Photo Courtesy X
ನವದೆಹಲಿ: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ ಬಿಡುಗಡೆ ಮಾಡಿರುವ ಪರಿಹಾರ ಪ್ಯಾಕೇಜ್‌ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು  ಪತ್ರ ಬರೆದಿದ್ದಾರೆ.

ಜುಲೈ 30, 2024 ರಂದು, ವಯನಾಡ್‌ನ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿ ಮಟ್ಟಂ ಗ್ರಾಮಗಳಲ್ಲಿ ಸರಣಿ ಭೂಕುಸಿತಗಳು ಸಂಭವಿಸಿ ಅಪಾರ ಪ್ರಾಣ ಹಾನಿ, ಆಸ್ತಿ ಹಾನಿ ಸಂಭವಿಸಿತ್ತು. ಈ ದುರಂತವು 250 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು, ಇನ್ನೂ 200 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ವಾರ, ಕೇಂದ್ರ ಸರ್ಕಾರವು 50 ವರ್ಷಗಳ ಕಾಲ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಅಡಿಯಲ್ಲಿ ಬಡ್ಡಿರಹಿತ ಸಾಲವಾಗಿ ಕೇರಳಕ್ಕೆ ₹529.50 ಕೋಟಿ ಸಹಾಯವನ್ನು ಮಂಜೂರು ಮಾಡಿದೆ. ಪುನರ್ವಸತಿ ವೆಚ್ಚವನ್ನು ಭರಿಸಲು ಕೇರಳ ಸರ್ಕಾರವು ವಿಶೇಷ ಹಣಕಾಸು ಪ್ಯಾಕೇಜ್ ಅನ್ನು ಕೋರಿದ ತಿಂಗಳ ನಂತರ ಅನುಮೋದನೆ ದೊರೆತಿದೆ, ಆರಂಭದಲ್ಲಿ ₹2,262 ಕೋಟಿ ಎಂದು ಅಂದಾಜಿಸಲಾಗಿದೆ. ಕೇಂದ್ರವು ಈ ಹಿಂದೆ ವಯನಾಡ್ ಭೂಕುಸಿತವನ್ನು "ತೀವ್ರ ಪ್ರಕೃತಿಯ ವಿಪತ್ತು ಎಂದು ವರ್ಗೀಕರಿಸಿತ್ತು.

ಕೇರಳದ ಸಂಸದರ ನಿರಂತರ ಒತ್ತಾಯದ ನಂತರ, ಕೇಂದ್ರ ಸರ್ಕಾರ ಇತ್ತೀಚೆಗೆ ವಿನಾಶದ ಸಂತ್ರಸ್ತರಿಗೆ ₹529.50ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿತು. ಆದರೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವಾಗ ಷರತ್ತುಗಳಿಂದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಸಂಸದರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments