Webdunia - Bharat's app for daily news and videos

Install App

ಬಾಯ್‌ಫ್ರೆಂಡ್‌ನನ್ನು ಪತ್ತೆ ಹಚ್ಚಲು ಗ್ಯಾಂಗ್‌ರೇಪ್ ಕೇಸ್ ದಾಖಲಿಸಿದ ಯುವತಿ

Webdunia
ಸೋಮವಾರ, 30 ಅಕ್ಟೋಬರ್ 2017 (14:27 IST)
ಫೋನ್ ಕರೆಗಳನ್ನು ಸ್ವೀಕರಿಸದೇ ನಾಪತ್ತೆಯಾಗಿದ್ದ ಬಾಯ್‌ಫ್ರೆಂಡ್‌ ವಂಚನೆಯಿಂದ ಆಕ್ರೋಶಗೊಂಡ 24 ವರ್ಷದ ಯುವತಿಯೊಬ್ಬಳು ಆತನನ್ನು ಪತ್ತೆ ಮಾಡಲು ನಕಲಿ ಗ್ಯಾಂಗ್‌ರೇಪ್ ಕೇಸ್ ದಾಖಲಿಸಿರುವ ಘಟನೆ ಲಾತೂರ್‌‌ನಲ್ಲಿ ನಡೆದಿದೆ
ಗ್ಯಾಂಗ್‌ರೇಪ್ ಕೇಸ್ ದಾಖಲಿಸಿಕೊಂಡ ಪೊಲೀಸರು ಯುವತಿಯ ಬಾಯ್‌ಫ್ರೆಂಡ್‌‌ನನ್ನು ಪತ್ತೆ ಮಾಡಿ ಕರೆ ತಂದ ನಂತರ ಯುವತಿ ಮತ್ತು ಆರೋಪಿ ಇಬ್ಬರು ಪ್ರೇಮಿಗಳಾಗಿದ್ದು ವಿವಾಹವಾಗಲು ಬಯಸಿದ್ದಾರೆ ಎನ್ನುವುದು ಗೊತ್ತಾಗಿದೆ.
 
ಯುವತಿ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದ್ದರೂ ಮಾನವೀಯತೆಯ ಆಧಾರದ ಮೇಲೆ ಆಕೆಯ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಬ್ಬರು ಪ್ರೇಮಿಗಳು ಅಕ್ಟೋಬರ್ 27 ರಂದು ವಿವಾಹವಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಿಲಿಂದ್ ಗಾಯಕ್ವಾಡ್ ತಿಳಿಸಿದ್ದಾರೆ.
 
ಯುವತಿ ಮತ್ತು ಯುವಕ ಇಬ್ಬರು ಲಾತೂರ್ ಮೂಲದವರಾಗಿದ್ದು ಪರಸ್ಪರ ಪ್ರೇಮಿಸುತ್ತಿದ್ದರು. ಉದ್ಯೋಗದ ಹುಡುಕಾಟದಲ್ಲಿ ಯುವಕ ಪುಣೆ ನಗರಕ್ಕೆ ಬಂದಿದ್ದ ಎನ್ನಲಾಗಿದೆ.
 
ಪುಣೆಗೆ ತೆರಳಿದ ನಂತರ ಬಾಯ್‌ಫ್ರೆಂಡ್ ಫೋನ್ ಕರೆಗಳನ್ನು ಸ್ವೀಕರಿಸದೇ ನಾಪತ್ತೆಯಾಗಿದ್ದರಿಂದ ಯುವತಿ ಆತನನ್ನು ಹುಡುಕಲು ನಗರಕ್ಕೆ ಬಂದು ಕೊಂದ್ವಾ ಪೊಲೀಸ್ ಠಾಣೆಯಲ್ಲಿ ಪ್ರೇಮಿಯ ವಿರುದ್ಧ ಗ್ಯಾಂಗ್‌ರೇಪ್ ದೂರು ದಾಖಲಿಸಿದ್ದಾಳೆ.
 
ಪೊಲೀಸರು ಆರೋಪಿ ಯುವಕನ ವಿಚಾರಣೆ ನಡೆಸಿದಾಗ, ಯುವತಿಯನ್ನು ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಲ್ಲದೇ ಆಕೆ ನಿರಂತರವಾಗಿ ಮ್ಯಾಸೇಜ್‌ಗಳನ್ನು ಕಳುಹಿಸುತ್ತಿರುವುದರಿಂದ ಬೇಸರಗೊಂಡು ಪೋನ್ ಕರೆಗಳನ್ನು ಸ್ವೀಕರಿಸುವದು ನಿಲ್ಲಿಸಿದ್ದೆ. ತಾನು ಪ್ರೀತಿಸುತ್ತಿದ್ದ ಯುವತಿ ಪುಣೆಗೆ ಬಂದಿರುವುದು ಗೊತ್ತಿರಲಿಲ್ಲ ಎಂದು ತಿಳಿಸಿದ್ದಾನೆ.   
 
ನಂತರ ಯುವಕ ಮತ್ತು ಯುವತಿಯನ್ನು ವಿಚಾರಣೆ ನಡೆಸಿದ ನಂತರ ಬಿಡುಗಡೆಗೊಳಿಸಲಾಯಿತು ಎಂದು ಕೊಂದವಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments