Select Your Language

Notifications

webdunia
webdunia
webdunia
webdunia

ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ

ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ
ಬೆಂಗಳೂರು , ಶುಕ್ರವಾರ, 11 ನವೆಂಬರ್ 2022 (15:15 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ.
 
ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

ಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ ಕನಕದಾಸ ಮತ್ತು ವಾಲ್ಮಿಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ವಾಗತಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ನಡೆಯಿತು ಮಾರಣಾಂತಿಕ ಹಲ್ಲೆ-ಜೀವ ಉಳಿಸಲು ಬೇಡಿಕೊಂಡ್ರೂ ಯಾರು ಬರಲಿಲ್ಲ