Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಬೇನಾಮಿ ಆಸ್ತಿದಾರರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ ವಾರ್ನಿಂಗ್

Webdunia
ಭಾನುವಾರ, 25 ಡಿಸೆಂಬರ್ 2016 (15:12 IST)
ನೋಟು ನಿಷೇಧ ಜಾರಿಗೊಳಿಸಿದ ನಂತರ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಸಮರ ಮುಂದುವರಿಸಿರುವ ಪ್ರಧಾನಿ ಮೋದಿ, ಶೀಘ್ರದಲ್ಲಿಯೇ ಬೇನಾಮಿ ಆಸ್ತಿ ಹೊಂದಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 
 
ಮನ್ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೋಟು ನಿಷೇಧ ಜಾರಿಗೊಳಿಸಿದ ನಂತರ ಸರದಿಯಲ್ಲಿ ನಿಯಮಗಳನ್ನು ಬದಲಾಯಿಸಿರುವುದನ್ನು ಸಮರ್ಥಿಸಿಕೊಂಡ ಅವರು ಜನತೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಕೆಲ ಕ್ರಮಗಳನ್ನು ತೆಗೆದುಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
 
ಭ್ರಷ್ಟಾಚಾರದ ವಿರುದ್ಧದ ಸಮರದಲ್ಲಿ ಸಾರ್ವಜನಿಕರು ಕೈಜೋಡಿಸಿದಾಗ ಕಾರ್ಯಾಚರಣೆ ಯಶಸ್ವಿಯಾಗುತ್ತದೆ. ಸಾಮಾನ್ಯ ಜನರು ನೀಡಿದ ಮಾಹಿತಿಯ ಮೇರೆಗೆ ದೊಡ್ಡ ದೊಡ್ಡ ಕಪ್ಪು ಹಣದ ಕುಳಗಳನ್ನು ಬಂಧಿಸಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದರು.
 
ಭ್ರಷ್ಟಾಚಾರ ವಿರುದ್ಧದ ಹೋರಾಟ ಅಂತ್ಯವಲ್ಲ ಆರಂಭ.. ಭ್ರಷ್ಟಾಚಾರಿಗಳು ಮತ್ತು ಕಪ್ಪು ಹಣ ಹೊಂದಿದವರ ವಿರುದ್ಧ ಹೋರಾಟ ನಿರಂತರವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments