Webdunia - Bharat's app for daily news and videos

Install App

ವಕೀಲರ ಜೀವ ಇತರರಿಗಿಂತ ಅಮೂಲ್ಯವೇನೂ ಅಲ್ಲ: 'ಸುಪ್ರೀಂ'

Webdunia
ಬುಧವಾರ, 15 ಸೆಪ್ಟಂಬರ್ 2021 (07:41 IST)
ನವದೆಹಲಿ : ಕೋವಿಡ್ ಅಥವಾ ಇತರ ಕಾರಣಗಳಿಂದ ಮೃತಪಟ್ಟ 60 ವರ್ಷದೊಳಗಿನ ವಕೀಲರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಒದಗಿಸುವಂತೆ ಕೇಂದ್ರ ಮತ್ತು ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿತು.

ವಕೀಲರ ಜೀವನವು ಇತರರಿಗಿಂತ 'ಹೆಚ್ಚು ಅಮೂಲ್ಯ' ಎಂದು ಹೇಳಲಾಗದು ಎಂದು ನ್ಯಾಯಾಲಯ ಈ ವೇಳೆ ತಿಳಿಸಿದೆ.
ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ವಿಕ್ರಂನಾಥ್, ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ನ್ಯಾಯಪೀಠವು, ವಕೀಲರು 'ಬೋಗಸ್' ಪಿಐಎಲ್ಗಳನ್ನು ಹಾಕುವುದನ್ನು ನಾವು ಬೆಂಬಲಿಸುವುದಿಲ್ಲ. ಇದು 'ಪ್ರಚಾರ ಹಿತಾಸಕ್ತಿಯ ಅರ್ಜಿ' ಆಗಿದೆ ಎಂದು ಪೀಠ ಬೇಸರ ವ್ಯಕ್ತಪಡಿಸಿತು.
ಕೋವಿಡ್ ಪಿಡುಗಿನಿಂದ ದೇಶದಲ್ಲಿ ಹಲವಾರು ಜನರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ವಿತರಿಸುವ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ನೀಡಿದೆ ಎಂದು ಪೀಠ ತಿಳಿಸಿತು. ಅರ್ಜಿ ಸಲ್ಲಿಸಿದ ವಕೀಲ ಪ್ರದೀಪ್ ಕುಮಾರ್ ಯಾದವ್ ಅವರನ್ನು ಕುರಿತು ಪೀಠವು, 'ಸಮಾಜದ ಇತರ ಜನರು ಮುಖ್ಯವಲ್ಲವೇ' ಎಂದು ಪ್ರಶ್ನಿಸಿತು.
'ಇದು ಪ್ರಚಾರ ಹಿತಾಸಕ್ತಿಯ ಅರ್ಜಿಯಲ್ಲದೆ ಮತ್ತೇನೂ ಅಲ್ಲ. ನೀವು ಕಪ್ಪು ಕೋಟ್ ಧರಿಸಿರುವ ಕಾರಣಕ್ಕೆ ನಿಮ್ಮ ಜೀವವು ಇತರರಿಗಿಂತ ಹೆಚ್ಚು ಅಮೂಲ್ಯ ಎಂದು ಭಾವಿಸುವುದು ಸರಿಯಲ್ಲ' ಎಂದು ಹೇಳಿದ ಪೀಠ, 'ವಕೀಲರು ನಕಲಿ ಪಿಐಎಲ್ಗಳನ್ನು ಸಲ್ಲಿಸುವುದನ್ನು ನಾವು ಪ್ರೋತ್ಸಾಹಿಸುವುದಿಲ್ಲ' ಎಂದಿತು.
ಅರ್ಜಿ ಸಲ್ಲಿಸಿದ್ದ ವಕೀಲರಿಗೆ ₹ 10 ಸಾವಿರ ವೆಚ್ಚವನ್ನು ವಾರದೊಳಗೆ ಸುಪ್ರೀಂಕೋರ್ಟ್ನ ವಕೀಲರ ಸಂಘಕ್ಕೆ ಪಾವತಿಸಬೇಕು ಎಂದು ಸೂಚಿಸಿದ ಪೀಠ, ಅರ್ಜಿಯನ್ನು ವಜಾಗೊಳಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments