Select Your Language

Notifications

webdunia
webdunia
webdunia
webdunia

ಮತಾಂತರ ತಡೆಗೆ ಕಾನೂನು ಅಗತ್ಯ : ಕೇಜ್ರಿವಾಲ್

ಮತಾಂತರ ತಡೆಗೆ ಕಾನೂನು ಅಗತ್ಯ : ಕೇಜ್ರಿವಾಲ್
ಚಂಡೀಗಢ , ಭಾನುವಾರ, 30 ಜನವರಿ 2022 (09:29 IST)
ಚಂಡೀಗಢ : ಮತಾಂತರದ ಕುರಿತು ಕಾನೂನು ರಚಿಸಬೇಕು. ಆದರೆ ಅದರ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡಬಾರದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಧರ್ಮವು ಪ್ರತಿಯೊಬ್ಬರ ಖಾಸಗಿ ವಿಷಯವಾಗಿದೆ. ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪೂಜಿಸುವ ಹಕ್ಕಿದೆ. ಆದರೆ ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ತಪ್ಪು. ಅಂತಹ ಮತಾಂತರ ತಡೆಗೆ ಕಾನೂನು ರಚಿಸುವುದು ಅತ್ಯವಶ್ಯವಾಗಿದೆ ಎಂದು ಹೇಳಿದರು.

ಮತಾಂತರದ ಹೆಸರಲ್ಲಿ ಯಾರಿಗೂ ಕಿರುಕುಳ ನೀಡಬಾರದು. ಅವರನ್ನು ಹೆದರಿಸಿ ಮತಾಂತರ ಮಾಡುವುದು ತಪ್ಪು. ಇದರ ತಡೆಗೆ ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾನೂನು ಜಾರಿಯಲ್ಲಿದೆ ಎಂದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧೀಜಿ ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ