Webdunia - Bharat's app for daily news and videos

Install App

ಜನರೇ ಆಯ್ಕೆ ಮಾಡಲಿ : ನಂಬರ್ ಕೊಟ್ಟ ಕೇಜ್ರಿವಾಲ್

Webdunia
ಗುರುವಾರ, 13 ಜನವರಿ 2022 (14:56 IST)
ಚಂಡೀಗಢ : ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ(ಎಎಪಿ) ಸಿಎಂ ಅಭ್ಯರ್ಥಿಯನ್ನು ಪಂಜಾಬ್ನ ಜನರು ನಿರ್ಧರಿಸುತ್ತಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದರು.
 
ಪಂಜಾಬ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಅವರು, ಎಎಪಿ ಮುಂದಿನ ಸಿಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡುತ್ತಾರೆ.

ಈ ಬಗ್ಗೆ ಜನರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಜನರಿಗಾಗಿಯೇ ಮೊಬೈಲ್ ನಂಬರ್ ಅನ್ನು ಬಿಡುಗಡೆ ಮಾಡಲಾಗುತ್ತೆ. ಆ ಮೂಲಕ ಜನರು ತಮ್ಮ ಅಭಿಪ್ರಾಯವನ್ನು ನೇರವಾಗಿ ತಿಳಿಸಬಹುದು ಎಂದು ನಂಬರ್ ಬಿಡುಗಡೆ ಮಾಡಿದರು.

ಈ ವೇಳೆ ಕೇಜ್ರಿವಾಲ್ ಅವರು 70748 70748 ನಂಬರ್ ಅನ್ನು ಬಿಡುಗಡೆ ಮಾಡಿದ್ದು, ಈ ನಂಬರ್ ಗೆ ಜನರು ಕರೆ ಮಾಡಿ ಜನವರಿ 17 ಸಂಜೆ 5 ಗಂಟೆಯವರೆಗೆ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಜನರು ಮುಕ್ತವಾಗಿ ಕರೆ ಮಾಡಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments