Webdunia - Bharat's app for daily news and videos

Install App

ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪತ್ರ

Webdunia
ಭಾನುವಾರ, 16 ಜನವರಿ 2022 (07:05 IST)
ಚಂಡೀಗಢ : ಗುರು ರವಿದಾಸ್ ಜಯಂತಿ ಇರುವುದರಿಂದ ಫೆಬ್ರವರಿ 14ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮನವಿ ಮಾಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿರುವ ಪಂಜಾಬ್ ಸಿಎಂ, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.32 ರಷ್ಟು ಇರುವ ಪರಿಶಿಷ್ಟ ಜಾತಿ ಸಮುದಾಯದ ಕೆಲವು ಪ್ರತಿನಿಧಿಗಳು, ಗುರು ರವಿದಾಸ್ ಅವರ ಜನ್ಮದಿನ ಫೆಬ್ರವರಿಯಲ್ಲೇ ನಡೆಯಲಿದೆ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಚುನಾವಣೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.

ಗುರು ರವಿದಾಸ್ ಅವರ ಜಯಂತಿ ಹಿನ್ನೆಲೆಯಲ್ಲಿ ಪರಿಶಿಷ್ಟ ಸಮುದಾಯದ ಲಕ್ಷಾಂತರ ಜನರು ಉತ್ತರ ಪ್ರದೇಶದ ಬನಾರಸ್ಗೆ ಫೆಬ್ರವರಿ 10ರಿಂದ 16ರವರೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ಇಂತಹ ಪರಿಸ್ಥಿತಿಯಲ್ಲಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಮತದಾನ ಅವರ ಸಂವಿಧಾನಬದ್ಧ ಹಕ್ಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments