Select Your Language

Notifications

webdunia
webdunia
webdunia
webdunia

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

ಯೋಗಿ ಆದಿತ್ಯನಾಥ್
ಲಕ್ನೋ , ಬುಧವಾರ, 26 ಏಪ್ರಿಲ್ 2023 (11:48 IST)
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಟೋಲ್ ಫ್ರೀ ಸಂಖ್ಯೆ 112ಕ್ಕೆ ಸಂದೇಶ ಕಳುಹಿಸಿ ಕೊಲೆ ಬೆದರಿಕೆ ಹಾಕಲಾಗಿದೆ.
 
ಉತ್ತರ ಪ್ರದೇಶದ 112 ವಾಟ್ಸಾಪ್ ಗ್ರೂಪ್ನಲ್ಲಿ ಜೀವ ಬೆದರಿಕೆಯ ಸಂದೇಶ ರವಾನೆಯಾಗಿದ್ದು, ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಸಂದೇಶದಲ್ಲಿ ಆರೋಪಿ ಮುಖ್ಯಮಂತ್ರಿ ಯೋಗಿಯನ್ನು ಕೊಲ್ಲುವುದಾಗಿ ಬರೆದಿದ್ದಾನೆ. ಸಂದೇಶವನ್ನು ಸ್ವೀಕರಿಸಿದ ತಕ್ಷಣ ಪೊಲೀಸರು ಎಡಿಜಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಮುಖ್ಯಮಂತ್ರಿ ಅಣ್ಣಾಮಲೈ ಎಂದ ತೇಜಸ್ವಿ ಸೂರ್ಯ