Webdunia - Bharat's app for daily news and videos

Install App

ಬಿಹಾರ್‌ನಲ್ಲಿ ಬಿಜೆಪಿಯನ್ನು ಓಡಿಸಿದಂತೆ ಉ,ಪ್ರದೇಶದಲ್ಲೂ ಓಡಿಸುತ್ತೇವೆ: ಲಾಲು ಯಾದವ್

Webdunia
ಶನಿವಾರ, 5 ನವೆಂಬರ್ 2016 (18:04 IST)
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದಂತೆ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅದೇ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
 
ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ನಾವು ಲಕ್ನೋಗೆ ಆಗಮಿಸಿದ್ದೇವೆ. ಬಿಹಾರ್‌ನಲ್ಲಿ ಬಿಜೆಪಿಯನ್ನು ಓಡಿಸಿದಂತೆ ಉ.ಪ್ರದೇಶದಲ್ಲೂ ಓಡಿಸಲಾಗುವುದು ಎಂದು ಗುಡುಗಿದರು.
 
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ನರಿಯನ್ನು ಓಡಿಸಿದಂತೆ ಬಿಜೆಪಿಯನ್ನು ಓಡಿಸಿ ಸಮಾಜವಾದಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ನಾವು ಇಲ್ಲಿಗೆ ಆಗಮಿಸಿದ್ದೇವೆ. ಉತ್ತರಪ್ರದೇಶದಲ್ಲೂ ಬಿಜೆಪಿಗೆ ಅದೇ ಗತಿಯಾಗಲಿದೆ ಎಂದು ವಾಗ್ದಾಳಿ ನಡೆಸಿದರು.
 
ಮೈತ್ರಿ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ಪಕ್ಷ ಇಲ್ಲಿ ಸ್ಪರ್ಧಿಸುತ್ತಿಲ್ಲ. ಆದ್ದರಿಂದ ಮೈತ್ರಿ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
 
ಸಮಾಜವಾದಿ ಪಕ್ಷದ ಮುಖಂಡರೊಂದಿಗೆ ಹಳೆಯ ಸಂಬಂಧವಿರುವುದರಿಂದ ಪಕ್ಷಧ ಬೆಳ್ಳಿ ಮಹೋತ್ವ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ. ಸದ್ಯಕ್ಕೆ ಮೈತ್ರಿ ಕುರಿತಂತೆ ಯಾವುದೇ ಚರ್ಚೆಯಿಲ್ಲ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ದೊಡ್ಡ ಪಕ್ಷವಾಗಿದ್ದರಿಂದ ಮುಲಾಯಂ ಸಿಂಗ್ ಯಾದವ್ ಮೈತ್ರಿಯ ಬಗ್ಗೆ ಉತ್ತರಿಸಲಿದ್ದಾರೆ ಎಂದು ಜೆಡಿ(ಯು) ಮುಖಂಡ ಶರದ್ ಯಾದವ್ ಹೇಳಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments