Select Your Language

Notifications

webdunia
webdunia
webdunia
webdunia

ಮದ್ಯ ಹಂಚಿಕೆ: ಬಿಜೆಪಿ ಪಕ್ಷದಿಂದ ಜಗದೀಶ್ ಚೌಧರಿ 6 ವರ್ಷ ಉಚ್ಛಾಟನೆ

ಮದ್ಯ ಹಂಚಿಕೆ: ಬಿಜೆಪಿ ಪಕ್ಷದಿಂದ ಜಗದೀಶ್ ಚೌಧರಿ 6 ವರ್ಷ ಉಚ್ಛಾಟನೆ

Sampriya

ಬೆಂಗಳೂರು , ಮಂಗಳವಾರ, 9 ಜುಲೈ 2024 (19:11 IST)
ಬೆಂಗಳೂರು: ನೆಲಮಂಗಲದಲ್ಲಿ ನಡೆದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿ, ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದ್ದಕ್ಕೆ  ಮಂಡಲ ಅಧ್ಯಕ್ಷ ಜಗದೀಶ್ ಚೌಧರಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.  

ಈ ಬಗ್ಗೆ ಬೆಂಗಳೂರು ಗ್ರಾಮಾಂತರದ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅವರು ಜಗದೀಶ್ ಅವರಿಗೆ ನೋಟಿಸ್ ನೀಡಿದ್ದಾರೆ.  

ಅದರಲ್ಲಿ ನೆಲಮಂಗಲ ತಾಲ್ಲೂಕಿನ ಭಾವಿಕೆರೆ ಬಳಿ ಆಯೋಜಿಸಿದ್ದ ನೂತನ ಸಂಸದರ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯವನ್ನು ಹಂಚಿರುವುದು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದು, ಇದು ಪಕ್ಷಕ್ಕೆ ಮುಜುಗರವನ್ನು ತಂದಿರುತ್ತದೆ ಮತ್ತು ಇದು ಪಕ್ಷದ ನೀತಿ, ತತ್ವ ಸಿದ್ಧಾಂತಗಳಿಗೆ ಹಾಗೂ ಇದು ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘಟನೆಯಾಗಿದೆ.

ಆದ್ದರಿಂದ ಮಾನ್ಯ ರಾಜ್ಯ ಅಧ್ಯಕ್ಷರ ಸೂಚನೆಯ ಮೇರೆಗೆ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನವರು ಇಟ್ಟ ಹೆಸರನ್ನು ಬದಲಿಸಲು ಗೊತ್ತು ಎಂದಾ ಎಚ್‌ಡಿಕೆ