ಕಾಂಗ್ರೆಸ್ ಸರ್ಕಾರದಲ್ಲಿ 'ಹನುಮಾನ್ ಚಾಲೀಸಾ' ಆಲಿಸುವುದು ಅಪರಾಧ: ಮೋದಿ ವಾಗ್ದಾಳಿ

Sampriya
ಮಂಗಳವಾರ, 23 ಏಪ್ರಿಲ್ 2024 (14:08 IST)
ಜೈಪುರ: ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ ರಾಜ್ಯದಲ್ಲಿ 'ಹನುಮಾನ್ ಚಾಲೀಸಾ' ಆಲಿಸುವುದು ಅಪರಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಟೊಂಕ್‌ನಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ, ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಮೊಬೈಲ್‌ ಶಾಪ್‌ವೊಂದರಲ್ಲಿ ಹನುಮಾನ್‌ ಚಾಲೀಸಾ ಆಲಿಸುತ್ತಿದ್ದ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿರುವುದನ್ನು ಅವರು ಉಲ್ಲೇಖಿಸಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿ ಒಬ್ಬರ ನಂಬಿಕೆಯನ್ನು ಗೌರವಿಸುವುದೂ ಕಷ್ಟ ಎಂದು ಎಂದು ಟೀಕಿಸಿರುವ ಮೋದಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುತ್ತದೆ ಎಂದು ಪುನರುಚ್ಚರಿಸಿದರು.

ದೇಶದ ಸಂಪತ್ತನ್ನು ಕಿತ್ತುಕೊಂಡು ಆಯ್ದ ಜನರಿಗೆ ಹಂಚಲು ಕಾಂಗ್ರೆಸ್ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ನಾನು ಬಹಿರಂಗ ಮಾಡಿದ್ದೇನೆ. ಕಾಂಗ್ರೆಸ್ ಏಕೆ ಸತ್ಯಕ್ಕೆ ಹೆದರುತ್ತದೆ? ತನ್ನ ನೀತಿಗಳನ್ನು ಏಕೆ ಮರೆಮಾಚುತ್ತದೆ ? ಎರಡು ಮೂರು ದಿನಗಳ ಹಿಂದೆ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣವನ್ನು ಬಯಲು ಮಾಡಿದ್ದೆ. ಇದಾದ ಬಳಿಕ ಕಾಂಗ್ರೆಸ್ ಹಾಗೂ ಅದರ 'ಇಂಡಿ' ಮೈತ್ರಿಕೂಟ ಎಲ್ಲ ಕಡೆ ಮೋದಿಯನ್ನು ನಿಂದಿಸಲು ಪ್ರಾರಂಭಿಸಿದೆ' ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments