Webdunia - Bharat's app for daily news and videos

Install App

ಎಲ್ಲಾ ಶಾಲೆಗಳಲ್ಲೂ ಲ್ಯಾಂಡಿಂಗ್ ನೇರ ಪ್ರಸಾರ : ಯೋಗಿ ಆದಿತ್ಯನಾಥ್

Webdunia
ಬುಧವಾರ, 23 ಆಗಸ್ಟ್ 2023 (10:56 IST)
ಲಕ್ನೋ : ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ (ಆ.23) ಚಂದ್ರನ ಮೇಲೆ ಲ್ಯಾಂಡ್ ಆಗುವ ದೃಶ್ಯವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ನೇರ ಪ್ರಸಾರ ವೀಕ್ಷಣೆಗೆ ನಾಳೆ ಶಾಲೆಗಳು ಸಂಜೆ ಒಂದು ಗಂಟೆ ವಿಶೇಷವಾಗಿ ತೆರೆದಿರುತ್ತವೆ. ಆಗಸ್ಟ್ 23 ರಂದು ಸಂಜೆ 5:27 ಕ್ಕೆ ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಇಸ್ರೋ ವೆಬ್ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಡಿಡಿ ನ್ಯಾಷನಲ್ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಿದೆ.

ಹೀಗಾಗಿ ಅಂದು ಸಂಜೆ 5:15 ರಿಂದ 6:15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆಗಳನ್ನು ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ಉಲ್ಲೇಖಿಸಿ ಸಿಎಂ ಹೇಳಿದ್ದಾರೆ.

ಬುಧವಾರ ಸಂಜೆ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ತನ್ನ ಹೊಟ್ಟೆಯಲ್ಲಿರುವ ಪ್ರಗ್ಯಾನ್ ರೋವರ್ನೊಂದಿಗೆ ಚಂದ್ರನ ಮೇಲ್ಮೈನಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗುವ ನಿರೀಕ್ಷೆಯಲ್ಲಿದೆ.

ಚಂದ್ರಯಾನ-3 ಯೋಜನೆಯ ಚಂದ್ರನ ಲ್ಯಾಂಡಿಂಗ್ ಒಂದು ಮಹತ್ವದ ಸಂದರ್ಭವಾಗಿದ್ದು, ಇದು ನಮ್ಮ ಯುವಜನರ ಮನಸ್ಸಿನಲ್ಲಿ ಕುತೂಹಲ ಹೆಚ್ಚಿಸುವುದಲ್ಲದೇ ಅನ್ವೇಷಣೆಯ ಉತ್ಸಾಹವನ್ನು ಪ್ರಚೋದಿಸುತ್ತದೆ ಎಂದು ಅಧಿಕಾರಿ ಮಧುಸೂಧನ್ ಹುಳಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments