Webdunia - Bharat's app for daily news and videos

Install App

ಸೆಲ್ಫಿ ನೆಪದಲ್ಲಿ ಮಹಿಳೆ, ಮಕ್ಕಳನ್ನು ಸೇತುವೆಯಿಂದ ತಳ್ಳಿದ ಲಿವ್ ಇನ್ ಪಾರ್ಟ್ನರ್ !

Webdunia
ಮಂಗಳವಾರ, 8 ಆಗಸ್ಟ್ 2023 (10:19 IST)
ಅಮರಾವತಿ : ಸೆಲ್ಫಿ ನೆಪದಲ್ಲಿ ಮಹಿಳೆ, 1 ವರ್ಷ ಹಾಗೂ 13 ವರ್ಷದ ಮಕ್ಕಳನ್ನು ಮಹಿಳೆಯ ಲಿವ್ ಇನ್ ಪಾರ್ಟ್ನರ್ ತುಂಬಿ ಹರಿಯುತ್ತಿದ್ದ ನದಿಯ ಸೇತುವೆಯಿಂದ ತಳ್ಳಿದ್ದು, ಘಟನೆಯಲ್ಲಿ 13ರ ಬಾಲಕಿ ಪವಾಡಸದೃಶದಂತೆ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

13 ವರ್ಷದ ಬಾಲಕಿ ಕೀರ್ತನ, ತನ್ನ ತಾಯಿ ಪುಪ್ಪಳ ಸುಹಾಸಿನಿ (36) ಹಾಗೂ ಬಾಲಕಿಯ 1 ವರ್ಷದ ಸಹೋದರಿ ಜರ್ಸಿಯನ್ನು ಭಾನುವಾರ ಮುಂಜಾನೆ ಗೋದಾವರಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯಿಂದ ತಳ್ಳಲಾಗಿತ್ತು. ಬಾಲಕಿ ಈ ವೇಳೆ ಸೇತುವೆಗೆ ಅಳವಡಿಸಲಾಗಿದ್ದ ಪ್ಲಾಸ್ಟಿಕ್ ಪೈಪ್ ಅನ್ನು ಬಿಗಿಯಾಗಿ ಹಿಡಿದು, ಪೊಲೀಸರ ಸಹಾಯಕ್ಕಾಗಿ ತನ್ನ ಜೇಬಿನಿಂದ ಫೋನ್ ತೆಗೆದುಕೊಂಡು 100ಕ್ಕೆ ಕರೆ ಮಾಡಿದ್ದಾಳೆ.

ಮಹಿಳೆ ಹಾಗೂ ಮಕ್ಕಳನ್ನು ಸೇತುವೆಗೆ ತಳ್ಳಿದ ಆರೋಪಿ ಉಳವ ಸುರೇಶ್ ಸುಹಾಸಿನಿಯ ಲಿವ್ ಇನ್ ಪಾರ್ಟ್ನರ್ ಆಗಿದ್ದ. ಗಂಡನಿಂದ ದೂರವಾಗಿದ್ದ ಸುಹಾಸಿನಿಗೆ ಸುರೇಶ್ ಪರಿಚಯವಾಗಿತ್ತು. ಹೀಗೆ ಸುರೇಶ್ ಹಾಗೂ ಸುಹಾಸಿನಿ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು.

ಭಾನುವಾರ ಇಬ್ಬರು ಮಕ್ಕಳು ಹಾಗೂ ಸುಹಾಸಿನಿಯನ್ನು ಸುರೇಶ್ ಪಿಕ್ನಿಕ್ ಕರೆದುಕೊಂಡು ಹೋಗಿದ್ದ ಮಾತ್ರವಲ್ಲದೇ ಗೆಳತಿ ಹಾಗೂ ಆಕೆಯ ಮಕ್ಕಳನ್ನು ಕೊಲ್ಲುವ ಸಂಚು ರೂಪಿಸಿದ್ದ. ಸೆಲ್ಫಿ ನೆಪದಲ್ಲಿ ಗೋದಾವರಿ ನದಿ ಬಳಿ ಕಾರು ನಿಲ್ಲಿಸಿ, ಮೂವರನ್ನು ಸೇತುವೆ ಅಂಚಿಗೆ ಕರೆದುಕೊಂಡು ಹೋಗಿ ನದಿಗೆ ತಳ್ಳಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments