Webdunia - Bharat's app for daily news and videos

Install App

ಲೋಕಸಭೆಯನ್ನು 2 ಗಂಟೆಗೆ ಮುಂದೂಡಿದ ಮಹಾಜನ್

Webdunia
ಸೋಮವಾರ, 3 ಆಗಸ್ಟ್ 2015 (13:15 IST)
ಇಂದು ಸಹ ಲೋಕಸಭೆ, ರಾಜ್ಯಸಭೆಗಳು ಕೋಲಾಹಲದಲ್ಲಿಯೇ ಮಿಂದೆದ್ದವು. ಲೋಕಸಭೆಯಲ್ಲಿ ಕಲಾಪ ಪ್ರಾರಂಭವಾಗುತ್ತಿದ್ದಂತೆ ಲಲಿತ್ ಪ್ರಕರಣ ಮತ್ತು ವ್ಯಾಪಂ ಹಗರಣದ ಆರೋಪಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಎಂದಿನಂತೆ  ಗದ್ದಲವನ್ನು ಪ್ರಾರಂಭಿಸಿದವು.  
 
ಸದನದ ಬಾವಿಗಳಿದು ಪ್ರತಿಭಟನೆಗಿಳಿದ ವಿರೋಧ ಪಕ್ಷದ ಸದಸ್ಯರನ್ನು ನಿಯಂತ್ರಿಸುವಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ವಿಫಲರಾದರು. 11 ರಿಂದ 12 ಗಂಟೆಗಳವರೆಗೆ ನಡೆದ ಸದನದಲ್ಲಿ ಕೇವಲ ಕೋಲಾಹಲ, ಪ್ರತಿಭಟನೆಗಳ ಹೊರತಾಗಿ ಯಾವುದೇ ವಿಷಯಗಳು ಚರ್ಚೆಗೆ ಬರಲಿಲ್ಲ.
 
ಸದನದ ಬಾವಿಗಳಿದು ಪ್ರತಿಭಟಿಸುತ್ತಿದ್ದ ವಿರೋಧ ಪಕ್ಷದವರಿಗೆ ಮಹಾಜನ್, ಭಿತ್ತಿ ಪತ್ರವನ್ನು ಸದನಕ್ಕೆ ತರಬೇಡಿ. ಅದು ನಿಯಮಕ್ಕೆ ವಿರುದ್ಧ ಎಂದು ಮತ್ತೆ ಎಚ್ಚರಿಕೆ ನೀಡಿದರು. 
 
ಕೋಲಾಹಲದಿಂದ ಸದನವನ್ನು ಮುಂದುವರೆಸಲು ವಿಫಲವಾದಾಗ ಸ್ಪೀಕರ್ 2 ಗಂಟೆಗೆ ಕಲಾಪವನ್ನು  ಮುಂದೂಡಿದ್ದಾರೆ. ಸದ್ಯ ಮಹಾಜನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯುತ್ತಿದೆ. 
 
ರಾಜ್ಯಸಭೆಯಲ್ಲಿ ಕೂಡ ಕಲಾಪ ಆರಂಭವಾಗುತ್ತಿದ್ದಂತೆ ಸುಷ್ಮಾ ರಾಜೀನಾಮೆಗೆ ಒತ್ತಾಯಿಸಿ ವಿರೋಧಪಕ್ಷಗಳು ಪ್ರತಿಭಟನೆ ನಡೆಸಿದವು. ಗದ್ದಲದ ನಡುವೆಯೂ ಸುಷ್ಮಾ ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಥಮ ಬಾರಿಗೆ ಸದನದಲ್ಲಿ ಸ್ಪಷ್ಟೀಕರಣ ನೀಡಲು ಪ್ರಯತ್ನಿಸಿದರು. ಆದರೆ ಅವರು ತಮ್ಮ ತಪ್ಪಿಲ್ಲ ಎನ್ನುತ್ತಿದ್ದಂತೆ ವಿರೋಧ ಪಕ್ಷಗಳ ಗಲಾಟೆ ಮಿತಿ ಮೀರಿತು. ಸದನ ಬಾವಿಗಿಳಿದ ಪ್ರತಿಪಕ್ಷಗಳು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದವು. 
 
ಕೋಲಾಹಲ ನಿಯಂತ್ರಣಕ್ಕೆ ಬರದಿದ್ದಾಗ ಉಪಸಭಾಪತಿ ಕುರಿಯನ್ ಕಲಾಪವನ್ನು ಮುಂದೂಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments