Webdunia - Bharat's app for daily news and videos

Install App

ಲೋಕಸಭಾ ಎಲೆಕ್ಷನ್ 2024 ಲೈವ್: ಮೊದಲನೆಯವರಾಗಿ ಬಂದು ವೋಟ್ ಮಾಡಿದ ನಟ ಅಜಿತ್, ರಜನೀಕಾಂತ್

Krishnaveni K
ಶುಕ್ರವಾರ, 19 ಏಪ್ರಿಲ್ 2024 (09:15 IST)
Photo Courtesy: Twitter
ಚೆನ್ನೈ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಚುನಾವಣೆ ಇಂದು ದೇಶದ 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ತಮಿಳುನಾಡಿನ ಚೆನ್ನೈನಲ್ಲಿ ಇಂದು ನಟ ಅಜಿತ್ ಕುಮಾರ್, ರಜನೀಕಾಂತ್ ಬೆಳ್ಳಂ ಬೆಳಿಗ್ಗೆಯೇ ಬಂದು ವೋಟ್ ಮಾಡಿದ್ದಾರೆ.

ಚೆನ್ನೈನಲ್ಲಿ ನಟ ಅಜಿತ್ ಕುಮಾರ್ ತಮ್ಮ ಪೋಲಿಂಗ್ ಬೂತ್ ಗೆ ಬೆಳ್ಳಂ ಬೆಳಿಗ್ಗೆ 6.45 ಕ್ಕೇ ಭೇಟಿ ಕೊಟ್ಟು ಮೊದಲನೆಯವರಾಗಿ ವೋಟ್ ಮಾಡಿದ್ದಾರೆ. ಅಜಿತ್ ಮತದಾನ ಮಾಡಲು ಬಂದಾಗ ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ. ಮತದಾನ ಮಾಡಿದ ಬಳಿಕ ಕಾರಿನತ್ತ ತೆರಳಲು ಅವರು ಹರಸಾಹಸಪಡಬೇಕಾಯಿತು.

ಇನ್ನೊಂದೆಡೆ ಸೂಪರ್ ಸ್ಟಾರ್ ರಜನೀಕಾಂತ್ ಕೂಡಾ ಚೆನ್ನೈನ ತಮ್ಮ ಮತಗಟ್ಟೆಯಲ್ಲಿ ವೋಟ್ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಜನೀಕಾಂತ್ ಎಲ್ಲರೂ ತಪ್ಪದೇ ಮತದಾನ ಮಾಡಿ. ನಾನು ಮತದಾನೆ ಮಾಡಿ ಎನ್ನುವುದು ಗೌರವದ ವಿಷಯ. ನಾನು ಮತದಾನ ಮಾಡಿಲ್ಲ ಎನ್ನುವುದು ಗೌರವವಲ್ಲ. ಎಲ್ಲರೂ ಕಡ್ಡಾಯವಾಗಿ ಬಂದು ವೋಟ್ ಮಾಡಿ ಎಂದಿದ್ದಾರೆ.

ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಡಿಎಂಕೆ ನಡುವೆ ನೇರ ಸ್ಪರ್ಧೆಯಿರುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಕೂಡಾ ಕೆಲವೊಂದು ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ. ಇನ್ನು, ಇಂದು ಮೊದಲನೇ ಹಂತದ ಮತನಾದ ಪ್ರಕ್ರಿಯೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಜನರಿಗೆ ಸಂದೇಶ ನೀಡಿದ್ದು, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಮತದಾನ ಎನ್ನುವುದು ಪ್ರತಿಯೊಬ್ಬ ಜನರ ಧ್ವನಿಯಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments