Webdunia - Bharat's app for daily news and videos

Install App

ಎನ್‌ಡಿಎ ಮುಖ್ಯಸ್ಥರಾಗಿ ಮೋದಿ, ಸ್ಪೀಕರ್ ಪದಕ್ಕೆ ಅಡ್ವಾಣಿ !

Webdunia
ಗುರುವಾರ, 15 ಮೇ 2014 (12:20 IST)
ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗೆ ಒಂದು ದಿನ ಬಾಕಿ ಇದ್ದು ಸಮೀಕ್ಷೆಗಳನ್ನು ನಂಬಿ ಕುಳಿತಿರುವ ಬಿಜೆಪಿ ಅಧಿಕಾರದ ಲೆಕ್ಕಾಚಾರದಲ್ಲಿ ತೊಡಗಿದೆ. ನಾಳೆ ಸಿಗಲಿರುವ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಬಹುಮತಗಳಿಸಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರಾಗಬಹುದು ಎಂದು  ವರದಿಯಾಗಿದೆ.

ಆ ಸಂದರ್ಭದಲ್ಲಿ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಲೋಕಸಭೆಯ ಸ್ಪೀಕರ್ ಆಗ್ ಆಯ್ಕೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 
 
ಬುಧವಾರ ಮೋದಿಯವರ ಜತೆ ಅವರ ಗಾಂಧೀನಗರದ ನಿವಾಸದಲ್ಲಿ  ನಡೆಸಿದ ಸಭೆಯಲ್ಲಿ, ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್, ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಅರುಣ್ ಜೆಟ್ಲಿ ಪಾಲ್ಗೊಂಡಿದ್ದರು. 
 
ಆಡ್ವಾಣಿ ಸೇರಿದಂತೆ  ಹಿರಿಯ ನಾಯಕರಿಗೆ ನೀಡಬೇಕಾಗಿರುವ ಸ್ಥಾನಮಾನಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಗಿದ್ದು ಸುಮಾರು ಐದು ಗಂಟೆಗಳ ಕಾಲ ಸಭೆಯನ್ನು ನಡೆಸಲಾಯಿತು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. 
 
ಏತನ್ಮಧ್ಯೆ, ಆಡ್ವಾಣಿ ಮತ್ತು ಅವರ ನಿಕಟವರ್ತಿ ಸುಷ್ಮಾ ಸ್ವರಾಜ್ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮೇಲೆ ಸಂತೋಷವಾಗಿಲ್ಲ ಎಂದು ಹೇಳಲಾಗುತ್ತಿದೆ. 
 
ಆದರೆ ಇದನ್ನು ತಳ್ಳಿ ಹಾಕಿರುವ ಆರ್‌ಎಸ್ಎಸ್ " ಈ ಸಭೆಗಳು ಆತಂಕದ ಪರಿಸ್ಥಿತಿಯ ಕಾರಣಕ್ಕೆ ನಡೆದಿಲ್ಲ. ಸಭೆಯಲ್ಲಿ ಪಾಲ್ಗೊಂಡಿರುವ ನಾಯಕರು ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.  ಎಲ್.ಕೆ. ಆಡ್ವಾಣಿ, ಸುಷ್ಮಾ ಸ್ವರಾಜ್  ಒಂದೇ ಒಂದು ಬಾರಿ ಕೂಡ ತಾವು ಅಸಂತುಷ್ಠರಾಗಿದ್ದೇವೆ ಎಂದು ಹೇಳಿಲ್ಲ. ಪಕ್ಷದಲ್ಲಿ ಎಲ್ಲವನ್ನು ಸರಿಪಡಿಸಲು ಸಂಘ ರಿಮೋಟ್ ಕಂಟ್ರೋಲ್ ನ್ನು ಬಳಸುವುದಿಲ್ಲ ಎಂದು ಹೇಳಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments