Webdunia - Bharat's app for daily news and videos

Install App

ಶಾಸಕ ಮುನಿರತ್ನ ಆಪ್ತ ವೆಂಡನ್ ನಿವಾಸಕ್ಕೆ ಲೋಕಾಯುಕ್ತ ದಾಳಿ

Webdunia
ಭಾನುವಾರ, 28 ಡಿಸೆಂಬರ್ 2014 (12:28 IST)
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಿತ್ರೋದ್ಯಮಿ ಮುನಿರತ್ನ ಅವರ ಆಪ್ತರಾಗಿರುವ ಬಿಬಿಎಂಪಿ ಸಹಾಯಕ ಎಂಜಿನಿಯರ್ ವೆಂಡನ್ ಎಂಬುವವರ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. 

 
ಕಾಮಗಾರಿ ನಡೆಸದೇ ನಕಲಿ ಬಿಲ್‌ಗಳನ್ನು ಸೃಷ್ಟಿಸುತ್ತಿದ್ದಾರೆ ಎಂಬ ಆರೋಪ ವೆಂಡನ್​ ಮೇಲಿತ್ತು. ತಮ್ಮ ವ್ಯಾಪ್ತಿಯಡಿ ಬರುವ ವಾರ್ಡ್‌ನಲ್ಲಿ ಸಂಗ್ರಹವಾಗಿದ್ದ ತೆರಿಗೆ ಹಣವನ್ನು ಬಿಬಿಎಂಪಿ ಕೇಂದ್ರ ಕಚೇರಿಗೂ ಪಾವತಿಸದೇ ವೆಂಡನ್ ದುರ್ಬಳಕೆ  ಮಾಡಿಕೊಳ್ಳುತ್ತಿದ್ದರು ಎಂದು ಸಹ ದೂರು ಕೇಳಿ ಬಂದಿದೆ. ಅವರಿಗೆ ಬೆಂಬಲ ಕೊಟ್ಟ ಆರೋಪ ಮುನಿರತ್ನ ಅವರಿಗೂ ಅಂಟಿಕೊಂಡಿದೆ.
 
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹೇಶ್​ ನೇತೃತ್ವದಲ್ಲಿ ವೆಂಡನ್ ಅವರ ನಿವಾಸದಲ್ಲಿ ಮಧ್ಯರಾತ್ರಿ 12 ಗಂಟೆಯವರೆಗೂ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ನಕಲಿ ದಾಖಲೆಗಳು ಹಾಗೂ ಬಿಲ್​‌ಗಳು ದೊರೆತಿವೆ. 
 
ಕಾಮಗಾರಿ ಪ್ರಾರಂಭಕ್ಕೂ ಮೊದಲೇ ಬಿಲ್​ ಪಾಸ್​ ಮಾಡಿಸಿ ಹಣ ಬಿಡುಗಡೆ ಮಾಡಿದ ಕಡತಗಳಿಗೆ ಶಾಸಕರ ಸಹಿ ಇರುವ ಕೆಲವು ದಾಖಲೆಗಳು ಸಹ ದೊರೆತಿವೆ. 
 
ಪೊಲೀಸರು ವಶಪಡಿಸಿಕೊಂಡಿರುವ ಪರಿಶೀಲನೆಯಲ್ಲಿ ತೊಡಗಿದ್ದು, ಅಗತ್ಯಬಿದ್ದರೆ ವೆಂಡನ್​ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments