Webdunia - Bharat's app for daily news and videos

Install App

ಟಿಟಿವಿ ದಿನಕರನ್ ವಿರುದ್ಧ ಲುಕೌಟ್ ನೋಟಿಸ್ ಜಾರಿ

Webdunia
ಬುಧವಾರ, 19 ಏಪ್ರಿಲ್ 2017 (08:51 IST)
ಅಣ್ಣಾಡಿಎಂಕೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚದ ಆಮಿಷವೊಡ್ಡಿದ ಆರೋಪ ಎದುರಿಸುತ್ತಿರುವ ಆಣ್ಣಾಡಿಎಂಕೆ ಉಪ ಕಾರ್ಯದರ್ಶಿ ಟಿಟಿವಿ ದಿನಕರನ್ ಬಂಧನಕ್ಕೆ  ದೆಹಲಿ ಪೊಲೀಸರು ಮುಂದಾಗಿದ್ದು, ಲುಕೌಟ್ ನೋಟಿಸ್ ಹೊರಡಿಸಲಾಗಿದೆ.

ದಿನಕರನ್ ದೇಶ ಬಿಟ್ಟು ತೆರಳುವ ಸಂಶಯದ ಹಿನ್ನೆಲೆಯಲ್ಲಿ ಲುಕೌಟ್ ನೋಟಿಸ್ ನೀಡಲಾಗಿದ್ದು, ಚೆನ್ನೇಗೆ ಬಂದಿಳಿದಿರುವ ದೆಹಲಿ ಪೊಲೀಸ್ ತಂಡ ಯಾವುದೇ ಕ್ಷಣದಲ್ಲಿ ದಿನಕರನ್ ಅವರನ್ನ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪನ್ನೀರ್ ಸೆಲ್ವಂ ಬಣ ಮತ್ತು ಶಶಿಕಲಾ ಬಣಗಳ ನಡುವೆ ಅಣ್ಣಾಡಿಎಂಕೆಯ ಎರಡು ಎಲೆ ಚಿಹ್ನೆಗಾಗಿ ತಿಕ್ಕಾಟ ಏರ್ಪಟ್ಟ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಚಿಹ್ನೆಯನ್ನ ಸ್ಥಗಿತಗೊಳಿಸಿತ್ತು. ಹೀಗಾಗಿ, ಏನಾದರೂ ಮಾಡಿ ಆ ಚಿಹ್ನೆಯನ್ನ ಪಡೆಯಲು ಮುಂದಾಗಿದ್ದ ದಿನಕರನ್ 60 ಕೋಟಿ ಹಣದ ಆಮಿಷ ಇಟ್ಟಿದ್ದರು ಎಂಬುದು ಆರೋಪ. ದೆಹಲಿ ಹೋಟೆಲ್ ಒಂದರಲ್ಲಿ ಮಧ್ಯವರ್ತಿ ಸುಖೇಶ್ ಚಂದರ್ ಎಂಬಾತನನ್ನ ಬಂಧಿಸಿದ್ದ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಸುಖೇಶ್ ಬಳಿ 1.5 ಕೋಟಿ ರೂ. ಹಣವನ್ನೂ ವಶಪಡಿಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments