Webdunia - Bharat's app for daily news and videos

Install App

ಕೌಸಲ್ಯ ಸುಪ್ರಜಾ ರಾಮ ಅಯೋಧ್ಯೆಗೆ ಪುನರಾಗಮನ

Krishnaveni K
ಸೋಮವಾರ, 22 ಜನವರಿ 2024 (07:47 IST)
Photo Courtesy: Twitter
ಅಯೋಧ್ಯೆ: ಇಡೀ ದೇಶವೇ ಎದಿರು ನೋಡುತ್ತಿದ್ದ, ಇನ್ನು ಕನಸೇನೋ ಎಂದು ಅಂದುಕೊಂಡಿದ್ದ ಆ ಶುಭ ಗಳಿಗೆ ಕೊನೆಗೂ ನನಸಾಗುತ್ತಿದೆ. ಅಯೋಧ್ಯೆಗೆ ಪ್ರಭು ಶ್ರೀರಾಮ ಚಂದ್ರನ ಪುನರಾಗಮನವಾಗುತ್ತಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾದ ಭವ್ಯ ಶ್ರೀರಾಮಚಂದ್ರನ ಮಂದಿರ ಇಂದು ಲೋಕಾರ್ಪಣೆಯಾಗುತ್ತಿದೆ. ಇದಕ್ಕಾಗಿ ಇಡೀ ಅಯೋಧ್ಯೆ ನಗರಿಯೇ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರಭು ಶ್ರೀರಾಮಚಂದ್ರನ ಪುನರಾಗಮನಕ್ಕಾಗಿ ಕಾದು ನಿಂತಿದೆ.

ಕೇವಲ ಅಯೋಧ್ಯೆ ಮಾತ್ರವಲ್ಲ, ದೇಶದ ಗಲ್ಲಿ ಗಲ್ಲಿಗಳಲ್ಲಿ ರಾಮನನ್ನು ಸ್ವಾಗತಿಸಲಾಗುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ರಾಮನಿಗೆ ಸ್ವಾಗತ ಫಲಕ ಹಾಕಲಾಗಿದ್ದರೆ, ದೇವಾಲಯಗಳಲ್ಲಿ ರಾಮನಿಗಾಗಿ ವಿಶೇಷ ಪೂಜೆ, ಹವನ ಜೊತೆಗೆ ಭಜನೆ ಮಾಡಿ ರಾಮನನ್ನು ಮತ್ತೆ ಅಯೋಧ್ಯೆಗೆ ಕರೆತರಲಾಗುತ್ತಿದೆ.

ಹೆಚ್ಚಿನ ದೇವಾಲಯಗಳಲ್ಲೂ ಲೋಕಾರ್ಪಣೆಯ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಕೆಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವು ಸಂಸ್ಥೆಗಳು ಉದ್ಯೋಗಿಗಳಿಗೆ ರಜೆ ನೀಡಿ ರಾಮಮಂದಿರ ಲೋಕಾರ್ಪಣೆಯ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಅವಕಾಶ ನೀಡಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments