Select Your Language

Notifications

webdunia
webdunia
webdunia
webdunia

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: 13 ಮಂದಿ ದುರ್ಮರಣ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: 13 ಮಂದಿ ದುರ್ಮರಣ
ತಿರುಪತಿ , ಶುಕ್ರವಾರ, 21 ಏಪ್ರಿಲ್ 2017 (20:10 IST)
ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿರುಪತಿಯಿಂದ 25 ಕಿ.ಮೀ ದೂರದ ಯೆರ್ಪೇಡುವಿನ ಶ್ರೀಕಾಳಹಸ್ಥಿ ಹೆದ್ದಾರಿಯಲ್ಲಿ ನಡೆದಿದೆ.
 

ಯೆರ್ಪೇಡು ಪೊಲೀಸ್ ಠಾಣೆ ಮುಂದೆಯೇ ಈ ಘಟನೆ ನಡೆದಿದ್ದು, ಶ್ರೀಕಾಳಹಸ್ಥಿಯಿಂದ ತಿರುಪತಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬಿ ಬಿದ್ದು 7 ಮಂದಿ ಮೃತಪಟ್ಟಿದ್ದಾರೆ. ಬಳಿಕ ಻ದೇ ಲಾರಿ ಸಮೀಪದ ಅಂಗಡಿಗೂ ನುಗ್ಗಿದ್ದು ಅಲ್ಲಿಯೂ 6 ಮಂದಿಯನ್ನ ಬಲಿ ಪಡೆದಿದೆ.

ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ವಿಪರ್ಯಾಸವೆಂದರೆ ಅಪಘಾತದ ಸಂದರ್ಭ ನೆರವಿಗೆ ಮುಂದಾದ ಕೆಲ ಸ್ಥಳೀಯರು ಕರೆಂಟ್ ಶಾಕ್`ನಿಂದ ಅಸುನೀಗಿದ್ದಾರೆ. ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಸಾವಿಗೆ ಹೊಸ ಟ್ವಿಸ್ಟ್ ನೀಡಿದ ಶಶಿಕಲಾ ಸಂಬಂಧಿ!