Webdunia - Bharat's app for daily news and videos

Install App

ಪ್ರೀತಿಸಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿದ ಪ್ರೇಮಿ!

Webdunia
ಸೋಮವಾರ, 15 ನವೆಂಬರ್ 2021 (19:42 IST)
ವಿಶಾಖಪಟ್ಟಣಂ : ತಾನು ಪ್ರೀತಿಸಿದ ಹುಡುಗಿ ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಸಾಯಲು ಪ್ರಯತ್ನಿಸಿದ ಘಟನೆ ಆಂಧ್ರಪ್ರದೇಶದ ವೈಜಾಗ್ನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ.
ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವರದಿಗಳ ಪ್ರಕಾರ, ಯುವಕನ ಪ್ರಪೋಸಲ್ ಅನ್ನು ಯುವತಿ ತಿರಸ್ಕರಿಸಿದ ನಂತರ ಈ ಘಟನೆ ನಡೆದಿದೆ. ತಾನೂ ಬೆಂಕಿ ಹಚ್ಚಿಕೊಂಡು, ಯುವತಿಗೆ ಬೆಂಕಿ ಹಚ್ಚಿದ ಯುವಕನನ್ನು ತೆಲಂಗಾಣದ ಭೂಪಾಲಪಲ್ಲೆ ಮೂಲದ ಪಿ. ಹರ್ಷವರ್ಧನ್ ಎಂದು ಗುರುತಿಸಲಾಗಿದೆ. ಆ ಯುವತಿ ವಿಶಾಖಪಟ್ಟಣಂ ಮೂಲದವರು. ಇಬ್ಬರೂ ಖಾಸಗಿ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ಓದುತ್ತಿದ್ದರು. ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿದ್ದರಿಂದ ಅವರು ತಮ್ಮ ತಮ್ಮ ಮನೆಗಳಲ್ಲಿಯೇ ವಾಸವಾಗಿದ್ದರು.
ಹರ್ಷವರ್ಧನ್ ಆ ಯುವತಿಯನ್ನು ಪ್ರೀತಿ ಮಾಡುತ್ತಿರುವುದಾಗಿ ಪ್ರಪೋಸಲ್ ಮಾಡಿದ ಮೇಲೆ ಆಕೆ ಆತನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಆತ ಕೋಪಗೊಂಡಿದ್ದ. ಇದರಿಂದ ವೈಜಾಗ್ನ ಲಾಡ್ಜ್ಗೆ ಆಕೆಯನ್ನು ಕರೆದುಕೊಂಡು ಹೋದ ಆತ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ಜೋರಾಗಿ ಹೊತ್ತಿಕೊಂಡ ನಂತರ ಅವರಿಬ್ಬರೂ ಸಹಾಯಕ್ಕಾಗಿ ಹೊರಗೆ ಓಡಿಬಂದಿದ್ದಾರೆ.
ಅವರಿಬ್ಬರನ್ನೂ ಲಾಡ್ಜ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ಯುವತಿ ತಾನು ಆ ಯುವಕನನ್ನು ಮದುವೆಯಾಗಲು ಒಪ್ಪದ ಕಾರಣದಿಂದ ಈ ರೀತಿ ಕೊಲ್ಲಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ಆದರೆ, ಆ ಯುವಕ ತಾವಿಬ್ಬರೂ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದೇವೆ. ಹೀಗಾಗಿಯೇ ಒಟ್ಟಿಗೇ ಸಾಯಲು ಪ್ರಯತ್ನಿಸಿದೆವು ಎಂದಿದ್ದಾನೆ. ಇಬ್ಬರ ಹೇಳಿಕೆಯೂ ಒಂದಕ್ಕೊಂದು ಸಂಬಂಧವಿಲ್ಲದಂತೆ ಇರುವುದರಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments