Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಜನತೆಯ ಭಾವನೆಗಳೊಂದಿಗೆ ಚೆಲ್ಲಾಟವಾಡುವುದು ಬೇಡ: ಆಜಂ ಖಾನ್

Webdunia
ಸೋಮವಾರ, 29 ಜೂನ್ 2015 (15:30 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಾರಣಾಸಿ ಪ್ರವಾಸ ಭಾರಿ ಮಳೆಯಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ, ಜನತೆಯ ಭಾವನೆಗಳೊಂದಿಗೆ ಚೆಲ್ಲಾಟವಾಡುವುದು ಶೋಭೆ ತರುವುದಿಲ್ಲ ಎಂದು ಉತ್ತರಪ್ರದೇಶದ ಸಚಿವ ಆಜಂ ಖಾನ್ ಹೇಳಿದ್ದಾರೆ.  
 
ಎರಡನೇ ಬಾರಿಗೆ ಪ್ರಧಾನಿ ಮೋದಿಯವರ ಭೇಟಿ ರದ್ದಾಗಿರುವುದು ವಾರಣಾಸಿ ಜನತೆಯ ಅದೃಷ್ಠವೋ ಅಥವಾ ದುರಾದೃಷ್ಠವೋ ಗೊತ್ತಿಲ್ಲ, ಪ್ರಧಾನಿ ಸಾರ್ವಜನಿಕ ಸಭೆ ನಡೆಸಿ ಅಡಿಗಲ್ಲು ಶಂಕುಸ್ಥಾಪನೆ ನೆರವೇರಿಸುವ ಬದಲು ಪ್ರಧಾನಿ ಕಚೇರಿಯಲ್ಲಿಯೇ ಕುಳಿತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.    
 
ಜನತೆಯ ಭಾವನೆಗಳೊಂದಿಗೆ ಆಟವಾಡುವುದರ ಬದಲು ಜನತೆಯನ್ನು ಗೌರವಿಸುವುದನ್ನು ಬಿಜೆಪಿ ಕಲಿಯುವುದು ಅಗತ್ಯವಾಗಿದೆ ಎಂದು ಖಾನ್ ಹೇಳಿದ್ದಾರೆ. 
 
ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾವತ್ತೂ ಪ್ರವಾಸವನ್ನು ರದ್ದುಗೊಳಿಸಿಲ್ಲ. ಎಂತಹದ್ದೆ ಹವಾಮಾನ ಪರಿಸ್ಥಿತಿಯಲ್ಲೂ ಪ್ರವಾಸ ಕೈಗೊಂಡು ಜನಪರ ಕಾರ್ಯಗಳನ್ನು ನೆರವೇರಿಸಿದ್ದಾರೆ. 
 
ಮಳೆಯಿರಲಿ ಅಥವಾ ಪ್ರವಾಹದ ಪ್ರಕೋಪವಿರಲಿ ಯಾವುದಕ್ಕೂ ಕೇರ್ ಮಾಡದೆ ಜನತೆಯ ಪರವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಉತ್ತರಪ್ರದೇಶದ ಅಖಿಲೇಶ್ ಸಂಪುಟದ ಸಚಿವ ಆಜಂ ಖಾನ್ ಹೇಳಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments