Webdunia - Bharat's app for daily news and videos

Install App

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಂದೇ ಗಂಟೆಯಲ್ಲಿ 17 ಮಂದಿಗೆ ಕಚ್ಚಿದ ಹುಚ್ಚು ನಾಯಿ

Sampriya
ಶನಿವಾರ, 17 ಆಗಸ್ಟ್ 2024 (17:59 IST)
Photo Courtesy X
ಉತ್ತರಪ್ರದೇಶ: ಹುಚ್ಚು ನಾಯಿಯೊಂದು ಒಂದು ಗಂಟೆಯೊಳಗೆ ಮಕ್ಕಳು, ಮಹಿಳೆಯರು ಸೇರಿದಂತೆ 17 ಮಂದಿ ಮೇಲೆ ಏಕಾಏಕಿ ದಾಳಿ ನಡೆಸಿ, ಗಾಯಗೊಳಿಸಿರುವ ಘಟನೆ  ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಇನ್ನೂ 22ವರ್ಷದ ವಿದ್ಯಾರ್ಥಿಯ ಮೇಲೆ ನಾಯಿ ದಾಳಿ ಮಾಡುತ್ತಿರುವ ವಿಡಿಯೋ ಭಯಾನಕವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆವಾಸ್ ವಿಕಾಸ್ ಕಾಲೋನಿಯಲ್ಲಿರುವ ಆಶಿಶ್ ಯಾದವ್ ಅವರ ಮನೆಯ ಹೊರಗಡೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ನಾಯಿ ದಾಳಿಸಿರುವುದು ಹೊರಗಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬುಧವಾರ ರಾತ್ರಿ 9.45 ಕ್ಕೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಬೀದಿ ನಾಯಿ ಆತನ ಮೇಲೆ ದಾಳಿ ನಡೆಸುವುದನ್ನು ನೋಡಬಹುದು.

ಆಶಿಶ್ ನಾಯಿಯನ್ನು ಹಿಮ್ಮೆಟ್ಟಿಸಲು ಮತ್ತು ಒದೆಯಲು ಪ್ರಯತ್ನಿಸುತ್ತಾನೆ ಆದರೆ ಅದು ಬೊಗಳುವುದು ಮತ್ತು ಕಚ್ಚುವುದನ್ನು ನಿಲ್ಲಿಸಲಿಲ್ಲ. ಆಶಿಶ್ ನೆಲಕ್ಕೆ ಬೀಳುತ್ತಿದ್ದ ಹಾಗೇ ಆತನ ಕಾಲಿಗೆ ಕಚ್ಚುತ್ತದೆ. ನಂತರ ಅವನ ಮುಖಕ್ಕೆ ಜಿಗಿದು ಕಚ್ಚುತ್ತದೆ. ಬಾಯಿ, ಕಣ್ಣು ಮತ್ತು ತುಟಿಗಳಿಂದ ರಕ್ತಸ್ರಾವವಾಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಇದಾದ ನಂತರ ಅಲ್ಲೇ ಮನೆಯ ಹೊರಗೆ ನಿಂತಿದ್ದ ಮಹಿಳೆಯ ಮೇಲೆ ನಾಯಿ ದಾಳಿ ಮಾಡಿದೆ.  ಅವಳ ಮೊಣಕಾಲು ಮತ್ತು ಕಾಲಿನ ಮೇಲೆ ದಾಳಿ ಮಾಡಿದೆ.  ನಂತರ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ನಾಯಿ ದಾಳಿ ಮಾಡಿದೆ.

ರೇಬಿಸ್ ಲಸಿಕೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಾಗ ಆಸ್ಪತ್ರೆಯಲ್ಲಿ ಶಾಟ್ ಮುಗಿದಿದೆ ಎಂದು ತಿಳಿಸಲಾಯಿತು ಎಂದು ಆಶಿಶ್ ತಂದೆ ವಿಜಯ್ ಯಾದವ್ ಹೇಳಿದ್ದಾರೆ. ನಾಯಿಗಳ ದಾಳಿಯ ಬಗ್ಗೆ ನಗರಸಭೆಗೆ ಮಾಹಿತಿ ನೀಡಿದ್ದರೂ ಬೀದಿ ನಾಯಿಗಳ ಹಾವಳಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಸಂತ್ರಸ್ತರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments