Select Your Language

Notifications

webdunia
webdunia
webdunia
webdunia

ಮಡದಿ, ಮಕ್ಕಳನ್ನು ಕೊಂದ ವೈದ್ಯ!?

ಮಡದಿ, ಮಕ್ಕಳನ್ನು ಕೊಂದ ವೈದ್ಯ!?
ಲಕ್ನೋ , ಭಾನುವಾರ, 5 ಡಿಸೆಂಬರ್ 2021 (11:36 IST)
ಲಕ್ನೋ : ಖಿನ್ನತೆಗೆ ಒಳಗಾಗಿದ್ದ ವೈದ್ಯನೊಬ್ಬ ಪತ್ನಿ ಹಾಗೂ ಮಕ್ಕಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಲ್ಯಾಣ್ಪುರ ಪ್ರದೇಶದಲ್ಲಿ ನಡೆದಿದೆ.
ಘಟನೆ ಬಳಿಕ ಪರಾರಿಯಾಗಿರುವ ವೈದ್ಯ ಕೊರೊನಾ ಹೊಸ ರೂಪಾಂತರ ತಳಿ ಓಮಿಕ್ರಾನ್ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿರುವ ವಿಚಾರ ಕುರಿತಂತೆ ಆರೋಪಿ ತನ್ನ ಸಹೋದರನಿಗೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಆರೋಪಿಯ ಸಹೋದರ ಘಟನೆ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ತನ್ನ ಪತ್ನಿ ಹಾಗೂ ಮಕ್ಕಳಿಬ್ಬರನ್ನು ಹತ್ಯೆಗೈದು ನಂತರ ವಾಟ್ಸಾಪ್ನಲ್ಲಿ ಸಹೋದರನಿಗೆ ಮಾಹಿತಿ ನೀಡಿದ್ದು, ತಾನು ಖಿನ್ನತೆಗೆ ಒಳಗಾಗಿರುವುದಾಗಿ ತಿಳಿಸಿದ್ದಾನೆ. ಸದ್ಯ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಸಿಕೆ ಪಡೆಯಲು ಬಂದಾತನಿಗೆ ಶಾಕ್!