Webdunia - Bharat's app for daily news and videos

Install App

ಮಹಾಕುಂಭಮೇಳದಿಂದ ಬರುವಾಗ ಭೀಕರ ಅಪಘಾತ, 7 ಸಾವು ಭೀಕರ ವಿಡಿಯೋ ಇಲ್ಲಿದೆ

Krishnaveni K
ಮಂಗಳವಾರ, 11 ಫೆಬ್ರವರಿ 2025 (14:03 IST)
ಮಧ್ಯಪ್ರದೇಶ: ಉತ್ತರ ಪ್ರದೇಶ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳಕ್ಕೆ ಹೋಗಿ ವಾಪಸಾಗುವಾಗ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು ಕಾರಿನಲ್ಲಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಈ ವಿಡಿಯೋದಲ್ಲಿ ಅಪಘಾತದ ತೀವ್ರತೆ ತಿಳಿಯಲಿದೆ.

ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಇಂದು ಟೆಂಪೊ ಟ್ರಕ್ ಗೆ ಕಾರು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ 7 ಮಂದಿ ಇಹಲೋಕ ತ್ಯಜಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅತ್ತ ಟ್ರಕ್ ಕೂಡಾ ಭಾಗಶಃ ಪುಡಿ ಪುಡಿಯಾಗಿದೆ. ಟ್ರಕ್ ಮತ್ತು ರಸ್ತೆಯ ತಡೆಗೋಡೆ ನಡುವೆ ಕಾರು ಸಿಲುಕಿದೆ. ಕೆಳಗೆ ನದಿಯಿದ್ದು ತಡೆಗೋಡೆಯಿದ್ದಿದ್ದರಿಂದ  ಅಪಘಾತದ ತೀವ್ರತೆಯಿಂದ ಕಾರು ಕೆಳಗೆ ಬಿದ್ದಿರಲಿಲ್ಲ.

ಮೃತರೆಲ್ಲರೂ ಆಂಧ್ರಪ್ರದೇಶದವರು ಎಂದು ತಿಳಿದುಬಂದಿದೆ. ಎಲ್ಲರೂ ಮಹಾಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಬರುತ್ತಿದ್ದರು. ಬರುವಾಗಲೇ ಅಪಘಾತ ಸಂಭವಿಸಿ ಪ್ರಾಣ ಬಿಡುವಂತಾಗಿದ್ದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments