Webdunia - Bharat's app for daily news and videos

Install App

Madhya Pradesh: ಮದುವೆ ಹಿಂದಿನ ದಿನ ಪೊಲೀಸರ ಎದುರೇ ಮದುಮಗಳನ್ನುಗುಂಡಿಕ್ಕಿ ಕೊಂದ ತಂದೆ

Krishnaveni K
ಬುಧವಾರ, 15 ಜನವರಿ 2025 (15:08 IST)
ಗ್ವಾಲಿಯರ್: ಮದುವೆ ಹಿಂದಿನ ದಿನ ಪೊಲೀಸರ ಎದುರೇ ಮದುಮಗಳನ್ನು ತಂದೆಯೇ ಗುಂಡಿಕ್ಕಿ ಕೊಂದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಅಷ್ಟಕ್ಕೂ ತಂದೆ ಇಂತಹದ್ದೊಂದು ಕೃತ್ಯವೆಸಗಿದ್ದು ಯಾಕೆ?

20 ವರ್ಷದ ಯುವತಿಗೆ ಮದುವೆ ನಿಶ್ಚಿಯವಾಗಿತ್ತು. ಎಲ್ಲಾ ಸರಿ ಹೋಗಿದ್ದರೆ ಇಂದು ಆಕೆಯ ಮದುವೆಯಾಗಬೇಕಿತ್ತು. ಆದರೆ ನಿನ್ನೆ ಪೊಲೀಸರ ಎದುರೇ ವಧುವಿಗೆ ಆಕೆಯ ತಂದೆ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಇದಕ್ಕೆ ವಧುವಿಗೆ ಬೇರೊಬ್ಬ ಯುವಕನೊಂದಿಗಿದ್ದ ಅಫೇರ್ ಕಾರಣ.

ಮದುವೆಗೆ ಕೆಲವೇ ಕ್ಷಣಗಳಿರುವಾಗ ವಧು ತನ್ನ ಪ್ರಿಯಕರನೊಂದಿಗಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಳು. ಇದನ್ನು ಕಂಡು ತಂದೆ ಸಿಟ್ಟಿಗೆದ್ದಿದ್ದು ಮಗಳನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕವಾಗಿಯೇ ಆಕೆ ತನಗೆ ನೀವು ನಿಶ್ಚಯ ಮಾಡಿರುವ ಮದುವೆ ಇಷ್ಟವಿಲ್ಲ. ಬೇರೊಬ್ಬನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಳು.

ಬಳಿಕ ಮನೆಯಿಂದ ಹೊರಬಂದಿದ್ದ ಆಕೆ ಮಹಿಳೆಯರ ಸಹಾಯ ಕೇಂದ್ರ ಸೇರಿಕೊಂಡಿದ್ದಳು. ಅಲ್ಲಿಗೆ ಸಂಧಾನ ಮಾಡುವ ನೆಪದಲ್ಲಿ ಬಂದಿದ್ದ ತಂದೆ, ಪೊಲೀಸರು ಅಲ್ಲಿರುವಾಗ ಅವರ ಎದುರೇ ಕಂಟ್ರಿಮೇಡ್ ಪಿಸ್ತೂಲ್ ನಿಂದ ತೀರಾ ಹತ್ತಿರದಿಂದಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಇದೀಗ ಆರೋಪಿ ತಂದೆಯನ್ನು ಅರೆಸ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments