Webdunia - Bharat's app for daily news and videos

Install App

ಅಂತ್ಯಕ್ರಿಯೆ ನಡೆಸಲು ಸಹೋದರರ ನಡುವೆ ಕಿತ್ತಾಟ: ತಂದೆಯ ಕಳೇಬರವನ್ನೇ ಎರಡು ಭಾಗ ಮಾಡಲು ಹೊರಟರು

Krishnaveni K
ಸೋಮವಾರ, 3 ಫೆಬ್ರವರಿ 2025 (11:50 IST)
ಮಧ್ಯಪ್ರದೇಶ: ಅಂತ್ಯಕ್ರಿಯೆ ನಡೆಸಲು ಸಹೋದರರ ನಡುವೆ ಕಿತ್ತಾಟವಾಗಿ ಕೊನೆಯ ತಂದೆಯ ಮೃತದೇಹವನ್ನೇ ಎರಡು ಭಾಗ ಮಾಡಲು ಹೊರಟ ಶಾಕಿಂಗ್ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸಹೋದರರ ನಡುವೆ ವೈಮನಸ್ಯಗಳು ಸಾಮಾನ್ಯ. ಸಹೋದರರ ನಡುವೆ ಕಿತ್ತಾಟವಾಗಿ ಆಸ್ತಿ ಭಾಗವಾಗುವುದು ಸಹಜ. ಆದರೆ ಇಲ್ಲಿ ತಂದೆಯ ಮೃತದೇಹವನ್ನೇ ಎರಡು ಭಾಗ ಮಾಡಿರುವುದು ನಿಜಕ್ಕೂ ಶಾಕಿಂಗ್.

ಮಧ್ಯಪ್ರದೇಶದ ತಾಲ್ ಲಿಧೋರಾ ಗ್ರಾಮದಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. 85 ವರ್ಷದ ಧ್ಯಾನಿ ಸಿಂಗ್ ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದರು. ಅವರ ಅಂತ್ಯ ಕ್ರಿಯೆ ನಡೆಸುವ ವಿಚಾರದಲ್ಲಿ ಸಹೋದರರಾದ ದಾಮೋದರ್ ಸಿಂಗ್ ಮತ್ತು ಕಿಶನ್ ಸಿಂಗ್ ನಡುವೆ ಜಗಳವಾಗಿದೆ.

ಇಷ್ಟು ದಿನವೂ ದಾಮೋದರ್ ಸಿಂಗ್ ತಮ್ಮ ತಂದೆಯನ್ನು ನೋಡಿಕೊಂಡಿದ್ದ. ಈಗ ತಂದೆಯ ಸಾವಿನ ಬಳಿಕ ಕಿಶನ್ ಇಲ್ಲದೇ ಅಂತ್ಯಕ್ರಿಯೆ ನಡೆಸಬೇಕೆಂಬುದು ದಾಮೋದರ್ ಹಠವಾಗಿತ್ತು. ಆದರೆ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ತಾನೂ ಇರಬೇಕು ಎಂಬುದು ಕಿಶನ್ ವಾದವಾಗಿತ್ತು.

ಇಬ್ಬರ ನಡುವೆ ಕಿತ್ತಾಟವಾಗಿ ಕೆಲವು ಹೊತ್ತು ಮೃತದೇಹ ಅನಾಥವಾಗಿತ್ತು. ಬಳಿಕ ಸಹೋದರರಿಬ್ಬರೂ ಮೃತದೇಹವನ್ನು ಎರಡು ಭಾಗ ಮಾಡಿ ಪ್ರತ್ಯೇಕವಾಗಿ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ್ದರು. ಆದರೆ ಈ ವೇಳೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments