Webdunia - Bharat's app for daily news and videos

Install App

ಇನ್ನೆರಡು ದಿನಗಳೊಳಗೆ ಜಯಲಲಿತಾ ದೇಹ ಸ್ಥಿತಿ ಬಹಿರಂಗ ಪಡಿಸಿ: ಆದೇಶಿಸಿದ ಹೈಕೋರ್ಟ್

Webdunia
ಮಂಗಳವಾರ, 4 ಅಕ್ಟೋಬರ್ 2016 (12:32 IST)
ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು ಜಯಾ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಆದೇಶಿಸಿದೆ. 

 
ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 
ಆಸ್ಪತ್ರೆಯಿಂದ ಮಾಹಿತಿ ಕಲೆ ಹಾಕಿ ಏನಾಗಿದೆ ಎಂಬುದನ್ನು  ಕೋರ್ಟ್ ಮೂಲಕ ಇನ್ನೆರಡು ದಿನಗಳೊಳಗೆ ಬಹಿರಂಗ ಪಡಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ತಾಕೀತು ಮಾಡಿದೆ. 
 
ಜಯಾ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಅನಿವಾರ್ಯತೆ ನಿಮಗೇನು ಎಂದು ಹೈಕೋರ್ಟ್ ರಾಮಸ್ವಾಮಿಯವರನ್ನು ಕೇಳಲಾಗಿ, 
ಸಿಎಂ ಆಗಿರುವ ಜಯಲಲಿತಾ ಆರೋಗ್ಯದ ನಮಗೆ ಕಾಳಜಿ ಇದೆ. ಅಪೋಲೋ ಆಸ್ಪತ್ರೆ ಕೇವಲ ಪತ್ರಿಕಾ ಪ್ರಕಟಣೆಯನ್ನು ನೀಡುತ್ತಿದೆ ಹೊರತು, ತಮಿಳುನಾಡು ಸರ್ಕಾರ ಈ ಕುರಿತು ಮಾಹಿತಿ ನೀಡಿಲ್ಲ ಎಂದು ರಾಮಸ್ವಾಮಿ ವಾದಿಸಿದ್ದರು. 
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಿಂದ ಪತ್ರಿಕಾ ಹೇಳಿಕೆಯನ್ನು ನೀಡುತ್ತಲೇ ಬಂದಿದೆ. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.
 
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಜಯಾ ಆರೋಗ್ಯ ಹೇಗಿದೆ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ಅರ್ಜಿಯಲ್ಲಿ ಕೇಳಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments