Webdunia - Bharat's app for daily news and videos

Install App

ಕಲಾಂ ಅಂತ್ಯಸಂಸ್ಕಾರದ ದಿನ ಮದ್ಯದಂಗಡಿ ಮುಚ್ಚುವಂತಿಲ್ಲ: ಮದ್ರಾಸ್ ಹೈಕೋರ್ಟ್

Webdunia
ಬುಧವಾರ, 29 ಜುಲೈ 2015 (20:43 IST)
ತಮಿಳುನಾಡಿನಲ್ಲಿ ಶೇ,30 ರಷ್ಟು ಜನರಿಗೆ ಮದ್ಯ ಸೇವನೆ ತುಂಬಾ ಅಗತ್ಯವಾದ ಪಾನೀಯವಾಗಿದ್ದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅಂತ್ಯಸಂಸ್ಕಾರದ ದಿನದಂದು ಸರಕಾರ ಮದ್ಯದಂಗಡಿಗಳನ್ನು ಮುಚ್ಚುವಂತೆ ಘೋಷಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. 
ನ್ಯಾಯಮೂರ್ತಿ ಸಿ.ಎಸ್.ಕರ್ನನ್ ನೇತೃತ್ವದ ನ್ಯಾಯಪೀಠ, ಅಗ್ನಿಶಾಮಕ ದಳ, ಪೊಲೀಸ್, ಮತ್ತು ಹಾಲು ಸರಬರಾಜು ಸೇವೆ ಅಗತ್ಯವಾಗಿರುವಂತೆ ಮದ್ಯ ಕೂಡಾ ರಾಜ್ಯದ ಶೇ.30ರಷ್ಟು ಜನರಿಗೆ ಅಗತ್ಯವಾಗಿದೆ. ಪಂಚತಾರಾ ಹೋಟೆಲ್‌ಗಳಲ್ಲಿ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಸರಬರಾಜು ಮಾಡಲಾಗುತ್ತದೆ. ಪಂಚಾತಾರಾ ಹೋಟೆಲ್‌ಗಳಿಗೆ ಹೋದವರು ಮದ್ಯ ಸೇವನೆಯ ಸೌಲಭ್ಯ ಪಡೆಯಬಹುದಾದರೇ ಸಾಮಾನ್ಯ ಜನರು ಯಾಕೆ ಮದ್ಯ ಸೇವನೆಯ ಸೌಲಭ್ಯ ಪಡೆಯಬಾರದು ಎಂದು ಪ್ರಶ್ನಿಸಿದ್ದಾರೆ.   
 
ಫೋರಂ ಫಾರ್ ಸೋಶಿಯಲ್ ಜಸ್ಟಿಸ್ ಪರ ವಕೀಲ ಕೆ.ಬಾಲು, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅಂತ್ಯಸಂಸ್ಕಾರದ ದಿನದಂದು ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಮದ್ಯದಂಗಡಿಗಳನ್ನು ಮುಚ್ಚಿಸುವಂತೆ ಸರಕಾರ ಆದೇಶ ನೀಡಬಾರದು ಎಂದು ಸ್ಪಷ್ಟಪಡಿಸಿದ್ದಾರೆ. 
 
ತಮಿಳುನಾಡು ಸರಕಾರ ಎಲ್ಲಾ ಸರಕಾರ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಸಾರ್ವಜನಿಕ ರಜೆ ಘೋಷಿಸಿದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಕರ್ನನ್ ಮದ್ಯದಂಗಡಿಗಳಿಗೆ ರಜೆ ಘೋಷಿಸದಂತೆ ಸರಕಾರಕ್ಕೆ ತಾಕೀತು ಮಾಡಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments