Webdunia - Bharat's app for daily news and videos

Install App

ಜಯಲಲಿತಾ ಮಗನೆಂದು ಹೇಳಿಕೊಂಡವನ ವಿರುದ್ಧ ಕ್ರಮಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

Webdunia
ಸೋಮವಾರ, 27 ಮಾರ್ಚ್ 2017 (16:03 IST)
ನಾನು ಜಯಲಲಿತಾ ಪುತ್ರ, ಅಮ್ಮನ ಆಸ್ತಿ ನನಗೇ ಸೇರಬೇಕೆಂದು ಮದ್ರಾಸ್ ಹೈಕೋರ್ಟ್ ಮುಂದೆ ಹೋಗಿದ್ದ ಕೃಷ್ಣಮೂರ್ತಿ ವಿರುದ್ಧ ಕ್ರಮ ಜರುಗಿಸುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಕೃಷ್ಣಮೂರ್ತಿ ಹೈಕೋರ್ಟ್`ಗೆ ನೀಡಿದ್ದ ದಾಖಲೆಗಳು ನಕಲಿ ಎಂದು ಪೊಲೀಸ್ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದ್ದು, ನ್ಯಾಯಾಲಯವನ್ನ ತಪ್ಪು ದಾರಿಗೆ ಎಳೆಯಲು ಯತ್ನಿಸಿದ ಕೃಷ್ಣಮೂರ್ತಿ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ.
 

ಈತ ನ್ಯಾಯಾಲಯಕ್ಕೆ ಮಾತ್ರ ಮೋಸ ಮಾಡಿಲ್ಲ, ನಕಲಿ ದಾಖಲೆಗಳನ್ನೂ ಸೃಷ್ಟಿಸಿದ್ದಾನೆ. ಹೀಗಾಗಿ, ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಿ ಎಂದು ಪೊಲೀಸರಿಗೆ ನ್ಯಾಯಮೂರ್ತಿ ಮಹದೇವನ್ ಆದೇಶಿಸಿದ್ದಾರೆ.

ಕೆಲ ವಾರದ ಹಿಂದಷ್ಟೇ ನ್ಯಾಯಾಲಯದ ಮುಂದೆ ಬಂದಿದ್ದ ಕೃಷ್ಣಮೂರ್ತಿಗೆ ಎಲ್ಲ ದಾಖಲೆಗಳನ್ನ ಪೊಲೀಸರಿಗೆ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು. ಇದೀಗ, ದಾಖಲೆಗಳ ಸತ್ಯಾ ಸತ್ಯತೆ ಬಗ್ಗೆ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್`ಗೆ ವರದಿ ಸಲ್ಲಿಸಿದ್ದರು.

ಶೋಭನ್ ಬಾಬು ನನ್ನ ತಂದೆ ಮತ್ತು ಜಯಲಲಿತಾ ನನ್ನ ತಾಯಿ ಎಂದು ಹೇಳಿದ್ದ ಕೃಷ್ಣಮೂರ್ತಿ ನೀಡಿದ್ದ ಫೋಟೋ,  ದತ್ತು  ನೀಡಲು ಎಂಜಿಆರ್ ಮಾಡಿದ್ದಾರೆನಲಾದ ಸಹಿಯ ದಾಖಲೆ ಇವೇ ಮುಂತಾದ ದಾಖಲೆಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದರು. ಕೃಷ್ಣಮೂರ್ತಿ ಸಲ್ಲಿಸಿರುವ ಎಲ್ಲ ದಾಖಲೆಗಳು ನಕಲಿ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments