Webdunia - Bharat's app for daily news and videos

Install App

ಅಸ್ಸಾಂನಲ್ಲಿ ಹೊಸ ನಿಯಮ : ಹೊಸ ನಿಯಮಗಳಲ್ಲಿ ಏನಿದೆ?

Webdunia
ಬುಧವಾರ, 24 ಆಗಸ್ಟ್ 2022 (08:50 IST)
ಗುವಾಹಟಿ : ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ಇಬ್ಬರು ಧರ್ಮಗುರುಗಳ ಬಂಧನದ ಬೆನ್ನಲ್ಲೇ ಅಸ್ಸಾಂನಲ್ಲಿ ಹೊರ ರಾಜ್ಯಗಳಿಂದ ಬರುವ ಧರ್ಮಗುರುಗಳು ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
 
ಅಸ್ಸಾಂ ಮಸೀದಿಗಳು ಮತ್ತು ಮದರಸಾಗಳಲ್ಲಿನ ಧರ್ಮಗುರುಗಳು ರಾಜ್ಯದ ಹೊರಗಿನಿಂದ ಬಂದರೆ ಸರ್ಕಾರಿ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದು ಸಿಎಂ ಸೂಚಿಸಿದ್ದಾರೆ. 
ಬಂಧಿತರಲ್ಲಿ ಒಬ್ಬ ಮಸೀದಿಯಲ್ಲಿ ಇಮಾಮ್ ಆಗಿ ಕೆಲಸ ಮಾಡುತ್ತಿದ್ದ. ಹಲವು ಗ್ರಾಮಗಳಲ್ಲಿ ಜಿಹಾದಿ ಜಾಲವನ್ನು ವಿಸ್ತರಿಸಿದ್ದ. ಜಿಹಾದಿ ಜಾಲವನ್ನು ವಿಸ್ತರಿಸುವುದಕ್ಕಾಗಿ ಆರು ಬಾಂಗ್ಲಾದೇಶಿ ಪ್ರಜೆಗಳು ಅಸ್ಸಾಂ ಪ್ರವೇಶಿಸಿದ್ದರು.

ಆರು ಬಾಂಗ್ಲಾದೇಶಿ ಪ್ರಜೆಗಳ ಪೈಕಿ ಒಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದು, ಐವರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅಸ್ಸಾಂ ಪೊಲೀಸರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ನಾವು ಈಗ ಕೆಲವು ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಮಾಡಿದ್ದೇವೆ. ಯಾವುದೇ ಇಮಾಮ್ ಗ್ರಾಮಕ್ಕೆ ಬಂದರೆ, ನೀವು ಪರಿಶೀಲನೆಗಾಗಿ ಸ್ಥಳೀಯ ಪೊಲೀಸರಿಗೆ ತಿಳಿಸಬೇಕು. ಪೊಲೀಸರು ಪರಿಶೀಲಿಸಿದ ನಂತರ, ಜನರು ಅವರನ್ನು ಇಮಾಮ್ ಆಗಿ ನೇಮಿಸಿಕೊಳ್ಳಬಹುದು. ಅಸ್ಸಾಂನ ಮುಸ್ಲಿಂ ಸಮಾಜವು ಈ ಕುರಿತು ನಮಗೆ ತಮ್ಮ ಬೆಂಬಲವನ್ನು ನೀಡುತ್ತಿದೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments