Webdunia - Bharat's app for daily news and videos

Install App

ಮಹಾಕುಂಭಮೇಳಕ್ಕೆ ಇಂದು ತೆರೆ: ಇಂದು ಕುಂಭಕ್ಕೆ ಭೇಟಿ ನೀಡುವವರು ಇದನ್ನು ಗಮನಿಸಿ

Krishnaveni K
ಬುಧವಾರ, 26 ಫೆಬ್ರವರಿ 2025 (09:24 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಅಧಿಕೃತವಾಗಿ ತೆರೆ ಬೀಳಲಿದೆ. ಕೊನೆಯ ದಿನ ಕುಂಭಕ್ಕೆ ಭೇಟಿ ನೀಡುವವರಿಗೆ ಸ್ಥಳೀಯಾಡಳಿತ ಕೆಲವು ಸೂಚನೆಗಳನ್ನು ನೀಡಿದೆ.

ಕೊನೆಯ ದಿನವಾಗಿರುವುದರಿಂದ ಇಂದು ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಭೇಟಿ ನೀಡಲಿದ್ದಾರೆ. ಅದರಲ್ಲೂ ಇಂದು ಶಿವರಾತ್ರಿಯಾಗಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಲಿದೆ. ಈ ಕಾರಣಕ್ಕೆ ಸ್ಥಳೀಯ ಆಡಳಿತ ಕೆಲವೊಂದು ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ನಿನ್ನೆ ಸಂಜೆಯಿಂದ ಪ್ರಯಾಗ್ ರಾಜ್ ವಾಹನ ನಿಷೇಧಿತ ವಲಯವಾಗಿ ಮಾರ್ಪಟ್ಟಿದೆ. ಕೆಲವೊಂದು ಅಗತ್ಯ ವಸ್ತುಗಳ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿಲ್ಲ. ಯಾವುದೇ ನೂಕುನುಗ್ಗಲು ಸಂಭವಿಸಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಭಕ್ತಾದಿಗಳು ತಮ್ಮ ಸಮೀಪದ ಸ್ನಾನ ಘಟ್ಟದಲ್ಲೇ ಸ್ನಾನ ಮಾಡಿ ಹತ್ತಿರದ ಶಿವನ ಗುಡಿ ಸಂದರ್ಶಿಸಲು ಸೂಚನೆ ನೀಡಲಾಗಿದೆ. ದಕ್ಷಿಣಿ ಝುನ್ಸಿ ಮಾರ್ಗ ಮತ್ತು ಅರಾಳಿ ಸೆಕ್ಟರ್ ಮೂಲಕ ಬರುವವರಿಗೆ ಅರಾಳಿ ಘಾಟ್ ಮೂಲಕ ಎಂಟ್ರಿಯಾಗಬಹುದು.ಉತ್ತರಿ ಝುನ್ಸಿ ಮಾರ್ಗ ಮೂಲಕ ಬರುವವರಿಗೆ ಹರಿಶ್ಚಂದ್ರ ಘಾಟ್ ಮತ್ತು ಓಲ್ಡ್ ಜಿಟಿ ಘಾಟ್ ಮೂಲಕ ಪ್ರವೇಶಿಸಲು ಅವಕಾಶವಿದೆ. ಪಾಂಡೆ ಕ್ಷೇತ್ರ ಮೂಲಕ ಎಂಟ್ರಿಯಾಗುವವರಿಗೆ ಭಾರದ್ವಾಜ ಘಾಟ್, ನಾಗವಸುಕಿ ಘಾಟ್, ಮೋರಿ ಘಾಟ್, ಕಾಲಿ ಘಾಟ್, ರಾಮ್ ಘಾಟ್ ಮತ್ತು ಹನುಮಾನ್ ಘಾಟ್ ಮೂಲಕ ಪ್ರವೇಶಿಸಲು ಸೂಚನೆ ನೀಡಲಾಗಿದೆ.

ಕುಂಭಮೇಳದಲ್ಲಿ ಕೊನೆಯ ದಿನವಾಗಿರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಲಿದೆ. ಹೀಗಾಗಿ ಯಾವುದೇ ನೂಕುನುಗ್ಗಲು ನಡೆಸದೇ ಶಾಂತ ರೀತಿಯಲ್ಲಿ ಪುಣ್ಯಸ್ನಾನ ಮಾಡಿ ತೆರಳುವಂತೆ ಸ್ಥಳೀಯ ಪೊಲೀಸರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments