Webdunia - Bharat's app for daily news and videos

Install App

ಮಹಾದಾಯಿ ವಿವಾದ ನ್ಯಾಯಮಂಡಳಿಯಲ್ಲಿ ಬಗೆಹರಿಯಲಿ- ಗೋವಾ ಸಿಎಂ

Webdunia
ಗುರುವಾರ, 11 ಜನವರಿ 2018 (07:13 IST)

ಮಹಾದಾಯಿ ನದಿ ನೀರು ಹಂಚಿಕೆಯ ವಿವಾದವನ್ನು ನ್ಯಾಯಮಂಡಳಿಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಹೇಳಿದ್ದಾರೆ.

ಪ್ರಧಾನಮಂತ್ರಿ ಜೊತೆಗಿನ ಭೇಟಿಯ ವಿವರ ಹಂಚಿಕೊಳ್ಳಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಮಾಧ್ಯಮದವರ ಮೇಲೆ ಕೋಪಗೊಂಡು ಸುದ್ದಿಗಾಗಿ ಮಾಧ್ಯಮಗಳು ಮಹಾದಾಯಿ ವಿವಾದವನ್ನು ಸೃಷ್ಠಿಸಿವೆ ಎಂದಿದ್ದಾರೆ.

ಮಹಾದಾಯಿ ವಿವಾದ ನ್ಯಾಯಮಂಡಳಿಯ ಅಂಗಳದಲ್ಲಿದ್ದು, ಅಲ್ಲಿಯೇ ಹೋರಾಟ ಮಾಡಿ, ವಿವಾದ ಬಗೆಹರಿಸಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಆದರೆ ಡಿಸೆಂಬರ್ ತಿಂಗಳಲ್ಲಿ ಮಹಾದಾಯಿ ನೀರಿನ ವಿವಾದ ಮಾತುಕತೆಯ ಮೂಲಕ ಬಗೆಹರಿಸಲು ಸಿದ್ಧರಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದ, ಗೋವಾ ಮುಖ್ಯಮಂತ್ರಿ ಮತ್ತೆ ವರಸೆ ಬದಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments