Webdunia - Bharat's app for daily news and videos

Install App

ಮಹಾಡ್ ಸೇತುವೆ ಕುಸಿತ: 15 ಮೃತ ದೇಹ ಪತ್ತೆ

Webdunia
ಶುಕ್ರವಾರ, 5 ಆಗಸ್ಟ್ 2016 (09:48 IST)
ಮಹಾರಾಷ್ಟ್ರದ ಮಹಾಡ್ ಬಳಿ ಗೋವಾ- ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ರಿಟಿಷ್ ಕಾಲದ ಸೇತುವೆ ಕುಸಿದ ಪರಿಣಾಮ ಸಾವಿತ್ರಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 15 ದೇಹಗಳು ಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಮತ್ತೂ 50ಕ್ಕಿಂತ ಹೆಚ್ಚು ಜನರು ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಪತ್ತೆಯಾಗಿರುವ ಎರಡು ಬಸ್‌ಗಳ ಶೋಧಕ್ಕೆ ಸರ್ವ ಪ್ರಯತ್ನ ನಡೆಸಿರುವ ಎನ್‌ಡಿಆರ್‌ಎಫ್‌ ಗುರುವಾರ 300 ಕೆ.ಜಿ. ತೂಕದ ಅಯಸ್ಕಾಂತವನ್ನು ಕ್ರೇನ್ ಸಹಾಯದಿಂದ ನದಿಯಲ್ಲಿ 40 ಅಡಿ ಆಳದಲ್ಲಿ ಇಳಿಬಿಟ್ಟು ಬಸ್ ಪತ್ತೆ ಹಚ್ಚಲು ಪ್ರಯತ್ನ ನಡೆಸುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ ಡ್ರೋನ್ ಬಳಕೆ ಕೂಡ ಮಾಡಲಾಗ್ತಿದೆ. ನಾಪತ್ತೆಯಾದವರು ನದಿ ನೀರಿನ ಮೂಲಕ ಸಮುದ್ರ ಪಾಲಾಗಿರೋ ಶಂಕೆ ವ್ಯಕ್ತವಾಗಿದೆ.

ಸಾವಿತ್ರಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ಸೆಳೆತಕ್ಕೆ ಮೃತದೇಹಗಳು ಘಟನಾ ಸ್ಥಳದಿಂದ 50ರಿಂದ 60 ಕಿ.ಮೀ.ವರೆಗೆ ಮೃತದೇಹಗಳು ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪತ್ತೆಯಾದ ಮೃತ ದೇಹಗಳಲ್ಲಿ  ಬಸ್ ಚಾಲಕ ಮತ್ತು ನಿರ್ವಾಹಕರದ್ದು ಸೇರಿದೆ ಎಂದು ಹೇಳಲಾಗುತ್ತಿದೆ.

ಒಂದು ಹೋಂಡಾ ಸಿಟಿ ಮತ್ತು ಒಂದು ತವೆರಾ ಸಹ ನದಿಯಲ್ಲಿ ಕೊಚ್ಚಿ ಹೋಗಿದ್ದು, ತವೆರಾದಲ್ಲಿ ಪ್ರಯಾಣಿಸುತ್ತಿದ್ದ  ಶೇವಂತಿ ಮಿರ್ಗಲ್ ಮತ್ತು ಸ್ನೇಹಾ ಬೈಕರ್ ದೇಹ ಪತ್ತೆಯಾಗಿದೆ.

ನೌಕಾಪಡೆ, ಎನ್‌ಡಿಆರ್‌ಎಫ್‌ ಹಾಗೂ ಕರಾವಳಿ ಕಾವಲು ಪಡೆಯ 160 ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಪರಿಹಾರ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.  

ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ನೀರಿನ ಸೆಳೆತ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಮಹಾಡ್ ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ  ಆದೇಶಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments