Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನೇಣಿಗೆ ಶರಣು

ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನೇಣಿಗೆ ಶರಣು
ಮುಂಬೈ , ಭಾನುವಾರ, 15 ಅಕ್ಟೋಬರ್ 2017 (11:07 IST)
ಮುಂಬೈ: ಕಾಂಗ್ರೆಸ್‌‌ನ ಹಿರಿಯ ಮುಖಂಡ ನೇಣಿಗೆ ಶರಣಾಗಿರುವ ಘಟನೆ ಮುಲುಂದ್‌‌ ನಲ್ಲಿ ನಡೆದಿದೆ. ಮಹದೇವ್‌ ಶೆಲರ್‌(64) ಆತ್ಮಹತ್ಯೆಗೆ ಶರಣಾದ ಮುಖಂಡ.

ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಹದೇವ್, ಇದೇ ಕಾರಣಕ್ಕೆ ತಮ್ಮ ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಮಹದೇವ್‌ ಮಹಾರಾಷ್ಟ್ರದ ಕಾಂಗ್ರೆಸ್‌ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ನಿನ್ನೆ ಪತ್ನಿ ಮಾರ್ಕೆಟ್‌ ಗೆ ಹೋಗಿದ್ದ ವೇಳೆ ಮಹದೇವ್‌ ಸಾವಿಗೆ ಶರಣಾಗಿದ್ದಾರೆ. ನಂತರ ಮನೆಗೆ ಬಂದ ಪತ್ನಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟೊತ್ತಿಗಾಗಲೆ ಮಹದೇವ್‌ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಹದೇವ್‌ ಮನೆಯಲ್ಲಿ ಡೆತ್‌ ನೋಟು ಪತ್ತೆಯಾಗಿದ್ದು, ಅನಾರೋಗ್ಯದಿಂದ ಸಾವಿಗೆ ಶರಣಾಗಿರುವುದಾಗಿ ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಸ್ನೇಹಿತನ ಮನೆಯ ಫ್ರಿಡ್ಜ್ ನಲ್ಲಿ ಪತ್ತೆ….!