Webdunia - Bharat's app for daily news and videos

Install App

ಮಹಾರಾಷ್ಟ್ರ: ಬಿಜೆಪಿ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ

Webdunia
ಶನಿವಾರ, 4 ಜೂನ್ 2016 (14:03 IST)
ಭೂಗತ ದೊರೆ ದಾವೂದ್ ಇಬ್ರಾಹಿಂನೊಂದಿಗಿನ ದೂರವಾಣಿ ಕರೆಗಳ ಆರೋಪ ಮತ್ತು ಭೂ ಕಬಳಿಕೆ ಆರೋಪ ಹೊತ್ತ ಮಹಾರಾಷ್ಟ್ರದ ಕಂದಾಯ ಖಾತೆ ಸಚಿವ ಏಕನಾಥ್ ಖಾಡ್ಸೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 
 
ನಿಮ್ಮನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವುದರಿಂದ ಸಚಿವ ಸಂಪುಟಕ್ಕೆ ಮತ್ತು ಬಿಜೆಪಿ ಸರಕಾರಕ್ಕೆ ಕೆಟ್ಟಹೆಸರು ಬರುವುದರಿಂದ ರಾಜೀನಾಮೆ ನೀಡುವುದೊಂದೆ ದಾರಿ ಎಂದು ಬಿಜೆಪಿ ಕೇಂದ್ರೀಯ ನಾಯಕತ್ವ ಕಠಿಣ ಆದೇಶ ನೀಡಿದ ನಂತರ ಖಾಡ್ಸೆ ಸಚಿವ್ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ.
 
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಅವರ ಅಧಿಕೃತ ನಿವಾಸ ''ವರ್ಷಾ'' ದಲ್ಲಿ ಭೇಟಿಯಾದ ಖಾಡ್ಸೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.
 
ಖಾಡ್ಸೆಯವರ ಹಗರಣದ ಬಗ್ಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದರು.
 
ಸಚಿವ ಸಂಪುಟದಲ್ಲಿ ಎರಡನೇ ಪ್ರಭಾವಿ ಸಚಿವರಾಗಿದ್ದ ಖಾಡ್ಸೆ, ಕರಾಚಿಯಿಂದ ದಾವೂದ್ ದೂರವಾಣಿಗಳ ಕರೆ ಬಹಿರಂಗವಾಗಿರುವುದು ಮತ್ತು ಭೂ ಕಬಳಿಕೆ ಸೇರಿದಂತೆ ಸರಣಿ ಹಗರಣಗಳು ಬಹಿರಂಗವಾಗಿದ್ದರಿಂದ ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ. 
 
ಮಹಾರಾಷ್ಟ್ರ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ 40 ಕೋಟಿ ಬೆಲೆಬಾಳುವ ಮೂರು ಏಕರೆ ಭೂಮಿಯನ್ನು ಕೇವಲ 3,75 ಕೋಟಿಗಳಿಗೆ ಖರೀದಿಸಿ ತಮ್ಮ ಪತ್ನಿ ಮತ್ತು ಅಳಿಯನ ಹೆಸರಿಗೆ ವರ್ಗಾಯಿಸಿದ್ದರು. 
 
ನಿನ್ನೆ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾಡ್ಸೆ, ಆಧಾರ ರಹಿತ ಆರೋಪಗಳ ಕುರಿತಂತೆ ಬಿಜೆಪಿ ಕೇಂದ್ರೀಯ ನಾಯಕತ್ವ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments