ಮಹಾರಾಷ್ಟ್ರ ಸರ್ಕಾರ ಸರ್ಕಸ್: ಎನ್ ಡಿಎಯಿಂದ ಹೊರಬಂದು ಎನ್ ಸಿಪಿ ಜತೆ ಮೈತ್ರಿಗೆ ಸಿದ್ಧವಾದ ಶಿವಸೇನೆ

Webdunia
ಸೋಮವಾರ, 11 ನವೆಂಬರ್ 2019 (10:03 IST)
ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ವಾರಗಳಾದರೂ ಇನ್ನೂ ಸರ್ಕಾರ ರಚನೆಯಾಗಿಲ್ಲ. ಯಾವುದೇ ಪಕ್ಷಕ್ಕೂ ಬಹುಮತ ಬಾರದೇ ಇರುವುದರಿಂದ ಇದೀಗ ಸರ್ಕಾರ ರಚನೆ ಸರ್ಕಸ್ ಜೋರಾಗಿದೆ.


ಬಿಜೆಪಿ ಮತ್ತು ಶಿವಸೇನೆ ನಡುವಿನ ಜಟಾಪಟಿ ತಾರಕಕ್ಕೇರಿದೆ. 50-50 ಫಾರ್ಮುಲಾಗೆ ಒಪ್ಪದ ಬಿಜೆಪಿ ಜತೆ ಮೈತ್ರಿ ಮುರಿದುಕೊಳ್ಳಲು ಶಿವಸೇನೆ ಸಿದ್ಧವಾಗಿದೆ. ಒಂದು ವೇಳೆ ಎನ್ ಡಿಎ ಕೂಟದಿಂದ ಹೊರಬಂದರೆ ಶಿವಸೇನೆ ಜತೆ ಮೈತ್ರಿಗೆ ಸಿದ್ಧ ಎಂದು ನಿನ್ನೆ ಎನ್ ಸಿಪಿ ಹೇಳಿಕೆ ನೀಡಿತ್ತು.

ಎನ್ ಸಿಪಿಯ ಬೇಡಿಕೆಗೆ ಒಪ್ಪಿರುವ ಶಿವಸೇನೆ, ಎನ್ ಡಿಎ ಕೂಟದಿಂದ ಹೊರಬರಲು ಸಿದ್ಧವಾಗಿದೆ. ಕೇಂದ್ರ ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯಲಿದ್ದು, ಎನ್ ಸಿಪಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ಸಿದ್ಧ ಎಂದು ಸಂಸದ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರಚಿಸಲು ಆಸಕ್ತಿ ತೋರುತ್ತಿಲ್ಲ. ಕೇವಲ ಎನ್ ಸಿಪಿ ಬೆಂಬಲದಿಂದ ಶಿವಸೇನೆಗೆ ಸರ್ಕಾರ ರಚಿಸಲು ಬೇಕಾಗುವಷ್ಟು ಸ್ಥಾನ ಬಲವಿಲ್ಲ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತ ಸಿಗಬೇಕಾದರೆ 1145 ಸ್ಥಾನ ಬಲ ಬೇಕು. ಸದ್ಯಕ್ಕೆ ಶಿವಸೇನೆ 56 ಮತ್ತು ಎನ್ ಸಿಪಿ 54 ಸಂಖ್ಯಾಬಲ ಹೊಂದಿದೆ. ಇವೆರಡರ ಜತೆಗೆ ಕಾಂಗ್ರೆಸ್ ಬೆಂಬಲ ನೀಡಿದರೆ ಮಾತ್ರ ಈ ಮೈತ್ರಿಗೆ ಬಹುಮತ ಸಾಬೀತುಪಡಿಸಲು ಸಾಧ‍್ಯ. ಹೀಗಾಗಿ ಮತ್ತೆ ಅತಂತ್ರ ಸ್ಥಿತಿ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments