Webdunia - Bharat's app for daily news and videos

Install App

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಊರಿಗೆ ಊರೇ ಕಟ್ಟಿಕೊಂಡು ನುಗ್ಗಿದ ಪೋಷಕರು, ಕಾಮದಾಹಿಗಳಿಗೆ ಸರಿಯಾಗಿ ಬೆಂಡೆತ್ತಿದ್ದು ಹೀಗೆ

Krishnaveni K
ಮಂಗಳವಾರ, 20 ಆಗಸ್ಟ್ 2024 (15:15 IST)
ಥಾಣೆ: ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ರೇಪ್ ಆಂಡ್ ಮರ್ಡರ್ ಕೇಸ್ ಸದ್ದು ಮಾಡುತ್ತಿರುವಾಗಲೇ ಮಹಾರಾಷ್ಟ್ರದಲ್ಲಿ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣ ವರದಿಯಾಗಿದೆ. ಆದರೆ ಇಲ್ಲಿ ಪೋಷಕರು ಇಡೀ ಊರನ್ನೇ ಕಟ್ಟಿಕೊಂಡು ಪ್ರತಿಭಟನೆಗೆ ಇಳಿದಿದ್ದಾರೆ.

ಥಾಣೆಯ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೇ ಕ್ರುದ್ಧರಾದ ಪೋಷಕರು ಇಡೀ ಊರನ್ನೇ ಕಟ್ಟಿಕೊಂಡು ಬದ್ಲಾಪುರ ರೈಲ್ವೇ ನಿಲ್ದಾಣದ ಹಳಿ ಆಕ್ರಮಿಸಿಕೊಂಡು ಪ್ರತಿಭಟನೆಗೆ ಮುಂದಾದವು.

ಪೋಷಕರ ಪ್ರತಿಭಟನೆಯ ಕಾವಿಗೆ ಬೆಚ್ಚಿ ಸ್ವತಃ ಸಿಎಂ ಏಕನಾಥ ಶಿಂಧೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ರಚಿಸಿದರು. ಅಲ್ಲದೆ, ಶಾಲೆಯ ಮ್ಯಾನೇಜ್ ಮೆಂಟ್ ಘಟನೆ ಸಂಬಂಧ ಪ್ರಾಂಶುಪಾಲ ಮತ್ತು ಇಬ್ಬರು ಸಹಾಯಕರನ್ನು ವಜಾಗೊಳಿಸಿ ಕ್ರಮ ಕೈಗೊಂಡಿತು.

ಪುಟಾಣಿ ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಇಡೀ ಪೋಷಕ ವರ್ಗದ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿತ್ತು. ಶಾಲೆಯ ಸಹಾಯಕ ಕಿಂಡರ್ ಗಾರ್ಟನ್ ನಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ಶೋಷಣೆ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆತನನ್ನು ಬಂಧಿಸಲಾಗಿದೆ. ಮಕ್ಕಳು ಟಾಯ್ಲೆಟ್ ಗೆ ತೆರಳಿದ್ದಾಗ ಜೊತೆಗೆ ಬಂದಿದ್ದ ಸಹಾಯಕ ಅನುಚಿತವಾಗಿ ಸ್ಪರ್ಶಿಸಿದ್ದ ಎನ್ನಲಾಗಿದೆ. ಇದೀಗ ಆತನ ಮೇಲೆ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಂತಹ ಒಂದು ಘಟನೆ ವರದಿಯಾಗುತ್ತಿದ್ದಂತೇ ಇಡೀ ಊರಿಗೆ ಊರೇ ಒಗ್ಗಟ್ಟಾಗಿ ನಿಂತು ಹೋರಾಟ ನಡೆಸಿದ್ದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ