Webdunia - Bharat's app for daily news and videos

Install App

ಗಾಂಧಿ ಹತ್ಯೆ ಹೇಳಿಕೆಗೆ ರಾಹುಲ್ ಕ್ಷಮಾಪಣೆ ಕೇಳಿದರೆ ಮಾತ್ರ ಆರ್‌ಎಸ್ಸೆಸ್ ರಾಜಿ

Webdunia
ಮಂಗಳವಾರ, 30 ಆಗಸ್ಟ್ 2016 (12:11 IST)
ಮಹಾತ್ಮ ಗಾಂಧಿ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಆರ್‌ಎಸ್‌ಎಸ್ ನಡುವಿನ ವಿವಾದ ಮತ್ತಷ್ಟು ಕಗ್ಗಂಟಾಗಿದೆ.  ರಾಹುಲ್ ಗಾಂಧಿ ಆರ್‌ಎಸ್ಸೆಸ್ ವಿರುದ್ಧ ಹೇಳಿಕೆ ಹಿಂತೆಗೆದುಕೊಳ್ಳಲು ಸುತಾರಾಂ ಒಪ್ಪುತ್ತಿಲ್ಲ.  ಕಾಂಗ್ರೆಸ್ ನಾಯಕ ರಾಹುಲ್ ಕ್ಷಮಾಪಣೆ ಕೇಳದೇ ರಾಜಿ ಮಾಡಿಕೊಳ್ಳಲು ಆರ್‌ಎಸ್ಸೆಸ್ ಒಪ್ಪುತ್ತಿಲ್ಲ. ಕ್ಷಮಾಪಣೆ ಕೇಳುವ  ತನಕ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿರುವ ಮಹಾರಾಷ್ಟ್ರ ಮೂಲದ ಆರ್‌ಎಸ್‌ಎಸ್ ನಾಯಕ ರಾಜೇಶ್ ಮಹದೇವ್ ಕುಂಟೆ ಖಡಾಖಂಡಿತವಾಗಿ ಹೇಳಿದ್ದಾರೆ. 
 
ಮಹಾತ್ಮಗಾಂಧಿಯನ್ನು ಆರ್‌ಎಸ್‌ಎಸ್ ಕೊಂದಿದೆ ಎಂಬ ತಮ್ಮ ಹೇಳಿಕೆಯನ್ನು ಭವಿಷ್ಯದಲ್ಲಿ ಪುನರಾವರ್ತಿಸುವುದಿಲ್ಲ ಎಂದು ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ಗೆ ಲಿಖಿತ ಭರವಸೆ ನೀಡಿದರೆ ಮಾತ್ರ ಪ್ರಕರಣ ಹಿಂತೆಗೆದುಕೊಳ್ಳುವುದಾಗಿ ಅವರು ಹೇಳಿದರು.
ಈಗ ಪ್ರಕರಣ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಆರ್‌ಎಸ್‌ಎಸ್ ಮಹಾತ್ಮ ಗಾಂಧಿಯನ್ನು ಕೊಂದಿದೆ ಎಂದು ರಾಹುಲ್ ಅರ್ಥವಾಗುವ ರೀತಿಯಲ್ಲಿ ಸ್ಪಷ್ಟವಾಗಿ ಟ್ವೀಟ್ ಮಾಡಿದ್ದಾರೆ ಎಂದು ಕುಂಟೆ ಹೇಳಿದರು.
 
ಈ ನಡುವೆ ಹಿರಿಯ ವಕೀಲ ಮತ್ತು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್  ಆಗಸ್ಟ್ 24ರಂದು ರಾಹುಲ್ ಆರ್‌ಎಸ್‌ಎಸ್ ಸಂಘಟನೆಯ ವಿರುದ್ಧ ಯಾವುದೇ ಆರೋಪ ಮಾಡಿಯೇ ಇಲ್ಲವೆಂದು ಸುಪ್ರೀಂಕೋರ್ಟ್‌ಗೆ  ಮನವಿ ಸಲ್ಲಿಸಿದರು. ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರವನ್ನು ಉದಾಹರಿಸಿದ ಸಿಬಲ್ ಆರ್‌ಎಸ್‌ಎಸ್‌ ಜತೆ ಸಂಬಂಧ ಹೊಂದಿದ ಕೆಲವೇ ಮಂದಿಯ ವಿರುದ್ಧ ಅವರು ಆರೋಪ ಹೊರಿಸಿದ್ದಾರೆಂದು ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments