Webdunia - Bharat's app for daily news and videos

Install App

ಬಿಜೆಪಿ ಸಂಸದನ ಮೇಲೆ ಕೊಲೆ ಆರೋಪ ಹೊರಿಸಿದ ಕೇಜ್ರಿವಾಲ್

Webdunia
ಸೋಮವಾರ, 20 ಜೂನ್ 2016 (09:50 IST)
ತಮ್ಮ ಪಕ್ಷದ 21 ಶಾಸಕರಿಗೆ ಲಾಭದಾಯಕ ಹುದ್ದೆ ನೀಡಿದ ಆರೋಪದಿಂದ ಮುಜುಗರಕ್ಕೀಡಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿ ಸಂಸದ ಮಹೇಶ್ ಗಿರಿ ಮತ್ತು ಉಪ ರಾಜ್ಯಪಾಲ ನಜೀಬ್ ಜಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ಬಿಜೆಪಿ ಸಂಸದ ಮಹೇಶ್ ಗಿರಿ ಕೊಲೆ ಆರೋಪಿಯಾಗಿದ್ದು ಅವರನ್ನು ತಕ್ಷಣ ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
 
ಪತ್ರ ಮುಖೇನ ನಜೀಬ್ ಜಂಗ್ ಅವರ ಮೇಲೆ ಆರೋಪ ಹೊರಿಸಿರುವ ಕೇಜ್ರಿವಾಲ್ ಎಮ್ಎಮ್ ಖಾನ್ ಹತ್ಯಾಕಾಂಡದಲ್ಲಿ ನೀವು ಎನ್‌ಡಿಎಮ್‌ಸಿ ಉಪಾಧ್ಯಕ್ಷ ಕರಣ್ ಸಿಂಗ್ ತಂವರ್ ಮತ್ತು ಬಿಜೆಪಿ ಸಂಸದ ಮಹೇಶ್ ಗಿರಿ ಅವರನ್ನು ಪೊಲೀಸ್ ವಿಚಾರಣೆಯಿಂದ ರಕ್ಷಿಸಿದ್ದೀರಿ ಎಂದು ಕಿಡಿಕಾರಿದ್ದಾರೆ.
 
ಇತ್ತೀಚಿನ ದಿನಗಳಲ್ಲಿ ನಿಮ್ಮ ಬಗ್ಗೆ ಮೋದಿ ಬಹಳ ಖುಷಿಯಾಗಿದ್ದಾರೆ ಎಂದು ಕೇಳಿಪಟ್ಟೆ. ಎಮ್ಎಮ್ ಖಾನ್ ಹತ್ಯಾಕಾಂಡದಲ್ಲಿ ಬಿಜೆಪಿಯ ಹಾಲಿ ಸಂಸದ ಮಹೇಶ್ ಗಿರಿ ಮತ್ತು ಮಾಜಿ ಶಾಸಕ ಕರಣ್ ಸಿಂಗ್ ತಂವರ್ ಬಹುವಾಗಿ ಕೇಳಿ ಬರುತ್ತಿದೆ. ನೀವು ಬಹಳ ಚಾಲಾಕಿತನದಿಂದ ಪೊಲೀಸರ ಬಳಿ ಮಾತನಾಡಿ ಅವರನ್ನು ರಕ್ಷಿಸಿದ್ದೀರಿ. ಬಿಜೆಪಿಯವರು ಎಷ್ಟು ಗೂಂಡಾಗಿರಿ ಮಾಡಿದರೂ ಅವರ ಕೂದಲನ್ನು ಅಲ್ಲಾಡಿಸಲಾಗುವುದಿಲ್ಲ ಎಂದು ಪ್ರಧಾನಿ ಮೋದಿಯವರಿಗೆ ಈಗ ಖಚಿತವಾಗಿರಬೇಕು. ನೀವು ಅವರನ್ನು ರಕ್ಷಿಸುತ್ತೀರಿ ಮತ್ತು ಆಪ್‌ ಪಕ್ಷದವರನ್ನು ಸುಳ್ಳು ಪ್ರಕರಣ ಜಡಿದು ಸಿಕ್ಕಿಸಿ ಹಾಕುತ್ತಿರಿ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. 
 
ನನ್ನ ಮೇಲಿನ ಆರೋಪವನ್ನು ಸಾಬೀತು ಮಾಡಿದರೆ ನಾನು ರಾಜಕಾರಣನ್ನು ಬಿಟ್ಟು ಬಿಡುತ್ತೇನೆ ಎಂದು ಸವಾಲು ಹಾಕಿರುವ ಗಿರಿ ಅರವಿಂದ ಕೇಜ್ರಿವಾಲ್ ಮನೆ ಎದುರು ಧರಣಿಗೆ ಕುಳಿತಿದ್ದಾರೆ. ಕೇಜ್ರಿವಾಲ್ ನನ್ನ ಮೇಲೆ ಹೊರಿಸಿರುವ ಆರೋಪವನ್ನು ಸಾಬೀತು ಪಡಿಸಲಿ, ಇಲ್ಲವಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ನ ಸರ್ವನಾಶಕ್ಕೆ ಕಾರಣವಾಗಿದ್ದು ಒಬ್ಬ ಮಹಿಳೆ, ಯಾರೀಕೆ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಮುಂದಿನ ಸುದ್ದಿ
Show comments