Webdunia - Bharat's app for daily news and videos

Install App

ಹೈದ್ರಾಬಾದ್‌ ಹೋಟೆಲ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ

Webdunia
ಶುಕ್ರವಾರ, 18 ಆಗಸ್ಟ್ 2017 (15:41 IST)
ದೆಹಲಿ ಮೂಲದ 20 ವರ್ಷ ವಯಸ್ಸಿನ ಮನೆಗೆಲಸದ ಯುವತಿಯ ಮೇಲೆ ಅಪರಿಚಿತ ಹೋಟೆಲ್ ಉದ್ಯೋಗಿ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. 
ಪೊಲೀಸ್ ಮೂಲಗಳ ಪ್ರಕಾರ, ಅತ್ಯಾಚಾರಕ್ಕೊಳಗಾದ ಯುವತಿ ನಿಶಾ ಖುರಾನಾ ತನ್ನ ಮಾಲೀಕಳಾದ ಪಾಯಲ್ ಮತ್ತು ಸ್ನೇಹಿತ ರಾಮುನೊಂದಿಗೆ ದೆಹಲಿಂದ ಹೈದ್ರಾಬಾದ್‌ಗೆ ಆಗಮಿಸಿ ಒಯೋ ಸಿಟಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಪಾಯಲ್ ಪ್ರತ್ಯೇಕ ನಾಲ್ಕನೇ ಮಹಡಿಯ ಕೋಣೆಯಲ್ಲಿ ವಾಸವಾಗಿದ್ದರೆ, ನಿಶಾ ಮತ್ತು ಆಕೆಯ ಸ್ನೇಹಿತ ರಾಮು ಎರಡನೇ ಮಹಡಿಯ ಮತ್ತೊಂದು ಕೋಣೆಯಲ್ಲಿ ವಾಸವಾಗಿದ್ದರು.
 
ಮೂವರು ನಿಶಾ ಕೋಣೆಯಲ್ಲಿ ಬೆಳಗಿನ ಜಾವ ಮೂರು ಗಂಟೆಯವರೆಗೆ ಹರಟೆ ಹೊಡೆಯುತ್ತಿದ್ದರು. 3 ಗಂಟೆ ಸುಮಾರಿಗೆ ರಾಮು ಕೋಣೆಯಿಂದ ಹೊರಹೋಗಿದ್ದನು. ತದನಂತರ ರೂಮ್ ಸರ್ವಿಸ್ ಎಂದು ಹೇಳಿ ಕೆಲವರು ಕೋಣೆಯ ಬೆಲ್ ಬಾರಿಸಿದರು. ಬಾಗಿಲು ತೆಗೆದೊಡನೆ ಕೋಣೆಯೊಳಗೆ ನುಗ್ಗಿದ ನಾಲ್ವರು ಆರೋಪಿಗಳು ನಿಶಾಳನ್ನು 403 ಕೋಣೆ ಸಂಖ್ಯೆಗೆ ಎಳೆದುಕೊಂಡು ಹೋದರು.  
 
ನಿಶಾ ಆರೋಪಿಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದಳಾದರೂ ಸಫಲವಾಗಲಿಲ್ಲ. ನಾಲ್ವರಲ್ಲಿ ಆರೋಪಿಯೊಬ್ಬ ಆಕೆಯನ್ನು ನಗ್ನಗೊಳಿಸಿ ಅತ್ಯಾಚಾರವೆಸಗಿದ್ದಾನೆ. ಮೂವರು ಆರೋಪಿಗಳು ಪಾಯಲ್ ಕೋಣೆಯೊಳಗೆ ನುಗ್ಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಅತ್ಯಾಚಾರಕ್ಕೊಳಗಾದ ನಿಶಾ, ನೀಡಿದ ವಿವರಗಳ ಸಹಾಯದಿಂದ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments