ಸರ್ಜಿಕಲ್ ಸ್ಟ್ರೈಕ್ ನಡೆದಾಗ ಸೈನಿಕರ ಸ್ಥಿತಿ ಹೇಗಿತ್ತು? ಮೇಜರ್ ಹೇಳಿದ್ದೇನು?

Webdunia
ಸೋಮವಾರ, 11 ಸೆಪ್ಟಂಬರ್ 2017 (09:23 IST)
ನವದೆಹಲಿ: ಪಾಕ್ ಆಕ್ರಮಿತ  ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರನ್ನು ಸದೆಬಡಿದ ನಮ್ಮ ವೀರ ಯೋಧರ ಸರ್ಜಿಕಲ್ ಸ್ಟ್ರೈಕ್ ಗೆ ಇದೀಗ ಒಂದು ವರ್ಷ. ಆಗ ಏನೇನು ನಡೆದಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇತ್ತು.

 
ಆದರೆ ಸೇನೆ ಏನನ್ನೂ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ಮೇಜರ್ ಮೈಕ್ ಟಾಂಗೋ ಆಗ ಏನೆಲ್ಲಾ ನಡೆದಿತ್ತು ಎನ್ನುವುದನ್ನು ತಮ್ಮ ಹೊಸ ಪುಸ್ತಕವೊಂದರಲ್ಲಿ ವಿವರಿಸಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ನಡೆಸಿ ಸೈನಿಕರು ಮರಳಿ ಗಡಿಯೊಳಗೆ ಬಂದಿದ್ದು ಅತೀ ಹೆಚ್ಚು ಸವಾಲಿನ ಕೆಲಸವಾಗಿತ್ತು ಎಂದು ಅವರು ಸ್ಮರಿಸಿಕೊಂಡಿದ್ದಾರೆ.

ಉರಿ ದಾಳಿಯಲ್ಲಿ ಸಂಕಷ್ಟಕ್ಕೀಡಾಗಿ ಸೇಡಿನ ಕಿಚ್ಚು ಹೊತ್ತಿದ್ದ ಸೈನಿಕರನ್ನೇ ಸರ್ಜಿಕಲ್ ಸ್ಟ್ರೈಕ್ ಗೆ ಆರಿಸಿಕೊಂಡಿತ್ತು.ಒಟ್ಟು 19 ಸೈನಿಕರ ತಂಡ ಸಿದ್ಧವಾಗಿತ್ತು. ಆದರೆ ಅವರನ್ನು ಕಳುಹಿಸುವ ಮೊದಲು ಅವರು ಜೀವಂತವಾಗಿ ವಾಪಸ್ ಬರುತ್ತಾರೋ ಇಲ್ಲವೋ ಎಂಬ ಅನುಮಾನ ಮನಸ್ಸಲ್ಲಿತ್ತು.

ಆದರೆ ಅಲ್ಲಿ ದಾಳಿ ನಡೆಸುವುದು ಯೋಧರಿಗೆ ಕಷ್ಟವಾಗಲಿಲ್ಲ. ಆದರೆ ವಾಪಸ್ ಬರುವುದು ಸವಾಲಾಗಿತ್ತು. ವಾಪಸ್ ಬರುವಾಗ ಪಾಕ್ ಯೋಧರಿಂದ ಗುಂಡಿನ ದಾಳಿಯಾಗುತ್ತಿತ್ತು. ಆದರೆ ಬರುವ ಮೊದಲು 38 ರಿಂದ 40 ಉಗ್ರರನ್ನು ಮತ್ತು ಎರಡು ಪಾಕ್ ಯೋಧರನ್ನು ಕೊಂದು ಬಂದಿದ್ದೆವು.

ಬರುವಾಗ ಹೆಚ್ಚು ತೆವಳಿಕೊಂಡೇ ಬರಬೇಕಾಗಿತ್ತು. ಮರದ ಎಲೆಗಳನ್ನು ಮೈಮೇಲೆ ಹಾಕಿಕೊಂಡು ಬರಬೇಕಾಯ್ತು. ಕಿವಿ ಹತ್ತಿರದಲ್ಲೇ ಗುಂಡು ಬೀಳುತ್ತಿತ್ತು. ಕೊನೆಗೂ ಸೂರ್ಯ ಮೇಲೇರುವ ಹೊತ್ತಿಗೆ ಭಾರತದ ಗಡಿಯೊಳಕ್ಕೆ ಬಂದಿದ್ದೆವು ಎಂದು ಮೇಜರ್ ಆ ದಿನವನ್ನು ವಿವರಿಸಿದ್ದಾರೆ.

ಇದನ್ನೂ ಓದಿ.. ಡೇರಾ ಬಾಬಾನ ದತ್ತು ಪುತ್ರಿ ಎಲ್ಲಿ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments