Select Your Language

Notifications

webdunia
webdunia
webdunia
webdunia

ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ: ಬಿಜೆಪಿ ತೆಕ್ಕೆಗೆ ಜಾರಿದ ಪ್ರಧಾನ ಕಾರ್ಯದರ್ಶಿ

ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ: ಬಿಜೆಪಿ ತೆಕ್ಕೆಗೆ ಜಾರಿದ ಪ್ರಧಾನ ಕಾರ್ಯದರ್ಶಿ
ಲಖನೌ , ಗುರುವಾರ, 23 ಜೂನ್ 2016 (11:08 IST)
ಚುನಾವಣೆ ಸಮೀಪಿಸುತ್ತಿದ್ದಂತೆ ನಡೆದಿರುವ ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷಕ್ಕೆ ಬಹುದೊಡ್ಡ ಆಘಾತವಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ತನ್ನ 200 ಸಹೋದ್ಯೋಗಿಗಳೊಂದಿಗೆ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ. 
ಘಾಜಿಯಾಬಾದ್ ಘಟಕದ ಪ್ರಧಾನ ಕಾರ್ಯದರ್ಶಿ ರಾಕೇಶ್ ತ್ಯಾಗಿ ಕಾಕ್ಡಾ ಬುಧವಾರ ತಮ್ಮ ಪಕ್ಷವನ್ನು ತ್ಯಜಿಸಿ ಬಿಜೆಪಿಯನ್ನು ಸೇರಿದ್ದಾರೆ. 200 ಸಹೋದ್ಯೋಗಿಗಳು ಸಹ ತ್ಯಾಗಿಯನ್ನು ಅನುಸರಿಸಿದ್ದಾರೆ. 
 
ಕಮಲಕ್ಕೆ ಸೇರಿದ ಬಳಿಕ ವರದಿಗಾರರೊಂದಿಗೆ ಮಾತನ್ನಾಡುತ್ತಿದ್ದ ರಾಕೇಶ್ ತ್ಯಾಗಿ ಈ ಬಾರಿಯ ಚುನಾವಣೆಯಲ್ಲಿ ಜನರು ಎಸ್‌ಪಿ ಮತ್ತು ಬಿಎಸ್‌ಪಿಗೆ ಮಣ್ಣು ಮುಕ್ಕಿಸಲಿದ್ದಾರೆ. ಎರಡು ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
 
ಉತ್ತರ ಪ್ರದೇಶದಲ್ಲಿ 2017ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೈ ನಡುಗಿಸುವ ಸಾಮೂಹಿಕ ಅತ್ಯಾಚಾರ: ಬೆಚ್ಚಿಬಿದ್ದ ಆಂಧ್ರ