ಎಐಎಮ್ಐಎಮ್ ಶಾಸಕ ಅಕ್ರಬುದ್ದಿನ್ ಓವೈಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. 2012ರಲ್ಲಿ ಬಿಜೆಪಿ ಮತ್ತು ಮೋದಿ ಅವರ ವಿರುದ್ಧ ಅವರಾಡಿದ್ದ ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ತೆಲಂಗಾಣ ಸರ್ಕಾರ ಒಪ್ಪಿಗೆ ನೀಡಿದೆ.
ತಮ್ಮ ಸಹೋದರ ಅಸಾದುದ್ದೀನ್ ಓವೈಸಿಯಂತೆ ಅಕ್ರಬುದ್ದೀನ್ ಓವೈಸಿ ಕೂಡ ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿರುತ್ತಾರೆ. 2012ರಲ್ಲಿ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ದ್ವೇಷದ ಮಾತುಗಳನ್ನಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಎಐಎಮ್ಎಐಮ್ ನಾಯಕನ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಆದಿಲಾಬಾದ್ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.