Malappuram Elephant: ಜಾತ್ರೆಯಲ್ಲಿ ರೊಚ್ಚಿಗೆದ್ದ ಆನೆ ಮನುಷ್ಯರನ್ನೇ ಎತ್ತಿ ಬಿಸಾಕಿತು: ಭಯಾನಕ ವಿಡಿಯೋ ಇಲ್ಲಿದೆ

Krishnaveni K
ಬುಧವಾರ, 8 ಜನವರಿ 2025 (14:07 IST)
ಬೆಂಗಳೂರು: ಜಾತ್ರೆಯಲ್ಲಿ ರೊಚ್ಚಿಗೆದ್ದ ಆನೆ ಮನುಷ್ಯರನ್ನೇ ಎತ್ತಿ ಬಿಸಾಕಿ ದಾಂಧಲೆ ನಡೆಸಿದ ದೃಶ್ಯವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೇರಳದ ಮಲಪ್ಪುರಂನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಲಪ್ಪುರ ಜಿಲ್ಲೆಯ ತಿರೂರಿನಲ್ಲಿ ದೇವಾಲಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆ ವೇಳೆ ಆನೆಗೆ ಆಭರಣ ತೊಡಿಸಿ ಬೇರೆ ಆನೆಗಳ ಜೊತೆ ನಿಲ್ಲಿಸಲಾಗಿತ್ತು. ಈ ವೇಳೆ ವಾದ್ಯ, ಗಂಟೆ, ಘೋಷಗಳು ಜೋರಾಗಿ ಮೊಳಗುತ್ತಿದ್ದವು.

ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ಜನರೂ ಸೇರಿದ್ದರು. ಇದರಿಂದ ಆನೆ ರೊಚ್ಚಿಗೆದ್ದಿತ್ತು. ಇದ್ದಕ್ಕಿದ್ದಂತೆ ಜನರತ್ತ ನುಗ್ಗಿದ ಆನೆ ಮೊದಲು ಜನರತ್ತ ನುಗ್ಗಿತ್ತು. ಬಳಿಕ ಒಬ್ಬಾತನನ್ನು ಎತ್ತಿ ಎಸೆದಿದೆ. ರಾತ್ರಿ ಈ ಘಟನೆ ನಡೆದಿದೆ.

ನಸುಕಿನ ಜಾವ 2.30 ರ ವೇಳೆ ಹೇಗೋ ಮಾವುತ ಆನೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಈ ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments