Publish Date: Thu, 01 Mar 2018 (10:19 IST)
Updated Date: Thu, 01 Mar 2018 (10:22 IST)
ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನೀಡಲಾಗಿದ್ದ ಆಹ್ವಾನವನ್ನು ಅವರು ತಿರಸ್ಕರಿಸಿದ್ದಾರೆ.
ಈ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನವಿತ್ತಿದ್ದರು. ಆದರೆ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಆಗಮಿಸಲಿದ್ದಾರೆ.
ಆದರೆ ಸಭೆಯಲ್ಲಿ ತಮಗೆ ವಿಶೇಷ ಆಹ್ವಾನಿತನ ಸ್ಥಾನ ನೀಡಲಾಗಿದೆಯಷ್ಟೆ. ಹೀಗಾಗಿ ಡಮ್ಮಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅದನ್ನು ವಿರೋಧಿಸುವ ಅಧಿಕಾರವಿರುವುದಿಲ್ಲ ಎಂದು ಸಭೆಯಲ್ಲಿ ಭಾಗವಹಿಸದೇ ಇರಲು ಖರ್ಗೆ ತೀರ್ಮಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ