Webdunia - Bharat's app for daily news and videos

Install App

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

Krishnaveni K
ಬುಧವಾರ, 9 ಜುಲೈ 2025 (09:26 IST)
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುರ್ಮಾಜಿ, ಮಾಜಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರನ್ನು ಕೊವಿಡ್ ಜಿ ಎಂದು ಮಲ್ಲಿಕಾರ್ಜುನ ಖರ್ಗೆ ಎಡವಟ್ಟು ಮಾಡಿಕೊಂಡು ಭಾರೀ ಆಕ್ರೋಶ ಕೇಳಿಬಂದಿದೆ.
 

ಛತ್ತೀಸ್ ಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಖರ್ಗೆ ಈ ಎಡವಟ್ಟು ಮಾಡಿಕೊಂಡಿದ್ದರು. ಈ ಮೂಲಕ ಬುಡಕಟ್ಟು ಜನಾಂಗಕ್ಕೆ ಸೇರಿದ ಮಹಿಳಾ ರಾಷ್ಟ್ರಪತಿಗಳನ್ನು  ಖರ್ಗೆ ಅವಮಾನಿಸಿದ್ದಾರೆ. ಹೀಗಾಗಿ ಅವರು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ರಾಷ್ಟ್ರಪತಿಗಳ ಹುದ್ದೆ ಎನ್ನುವುದು ಅತ್ಯಂತ ಗೌರವಯುತ ಹುದ್ದೆಯಾಗಿದೆ. ಆದರೆ ಅವರ ಹೆಸರನ್ನೇ ತಪ್ಪಾಗಿ ಉಚ್ಚರಿಸಿರುವ ಮಲ್ಲಿಕಾರ್ಜುನ ಖರ್ಗೆ ಸೋಷಿಯಲ್ ಮೀಡಿಯಾದಲ್ಲೂ ಟ್ರೋಲ್ ಆಗಿದ್ದಾರೆ. ಬಿಜೆಪಿ ದಲಿತ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಿರುವುದರ ಹಿಂದಿನ ಅಸಲಿ ಉದ್ದೇಶವೇನು ಎಂದು ವಾಗ್ದಾಳಿ ನಡೆಸುತ್ತಿದ್ದ ಖರ್ಗೆ ಬಿಜೆಪಿಯವರು ನಾವು ಮುರ್ಮಾಜಿಯವರನ್ನು ರಾಷ್ಟ್ರಪತಿ ಮಾಡಿದ್ದೇವೆ, ಕೊವಿಡ್ ಜಿ ಅವರನ್ನು ಮಾಡಿದ್ದೇವೆ ಎನ್ನುತ್ತಾರೆ. ಯಾಕೆ ಮಾಡಿದ್ರು? ದೇಶದ ಅರಣ್ಯ ಪ್ರದೇಶ, ಸಂಪತ್ತು ಕೊಳ್ಳೆ ಹೊಡೆಯಲಾ ಎಂದು ಪ್ರಶ್ನೆ ಮಾಡಿದ್ದಾರೆ.

ತಪ್ಪು ಅರಿವಾದ ತಕ್ಷಣ ಖರ್ಗೆ ತಿದ್ದುಕೊಂಡು ಹೇಳಿದ್ದರು. ಹಾಗಿದ್ದರೂ ಇದನ್ನು ಬಿಜೆಪಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಿಬಿಟ್ಟಿದ್ದು ವಾಗ್ದಾಳಿ ನಡಸಿದೆ. ಈ ಮೂಲಕ ಖರ್ಗೆ ದಲಿತ ರಾಷ್ಟ್ರಪತಿಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮುಂದಿನ ಸುದ್ದಿ
Show comments