Publish Date: Sun, 07 Jun 2026 (16:50 IST)
Updated Date: Sun, 07 Jun 2026 (16:53 IST)
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವರು ಗೃಹ ಬಳಕೆಯ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ದರ ಏರಿಕೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಸಂಬಂಧ ಅವರು ಬರೆದುಕೊಂಡು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.
ಕಳೆದ ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರವು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ₹89 ರಷ್ಟು ಹೆಚ್ಚು ಮಾಡಿದೆ. ಈ ವಿಚಾರವಾಗಿ ಕೇಂದ್ರದ ಮುಂದೆ ಖರ್ಗೆ ಮೂರು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
ಮೊದಲನೆಯದಾಗಿ, 'ಸಂಸತ್ತಿನಲ್ಲಿ ಪಶ್ಚಿಮ ಏಷ್ಯಾ ಯುದ್ಧದಿಂದಾಗಿ 41 ದೇಶಗಳಿಂದ ಇಂಧನ ಪೂರೈಸುವ ಬಗ್ಗೆ ಪ್ರಧಾನಿ ಮೋದಿ ಸಮರ್ಥನೆಯನ್ನು ನೀಡಿದ್ದರು. ಅದೀಗ ಏನಾಯಿತು? ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಎಲ್ಪಿಜಿ ಕೊರತೆ ಏಕೆ ಕಾಡುತ್ತಿದೆ?' ಎಂದಿದ್ದಾರೆ.
'ಎರಡನೇಯದಾಗಿ 2025-26ರಲ್ಲಿ ಉಜ್ವಲ ಯೋಜನೆಯ ಅಡಿಯಲ್ಲಿ 5.56 ಕೋಟಿ ಕುಟುಂಬಗಳು ಒಂದೇ ಒಂದು ಮರುಪೂರಣವನ್ನು ಪಡೆದಿಲ್ಲ. ಈ ಪೈಕಿ ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೂ ಮುನ್ನವೇ 3.30 ಕೋಟಿ ಕುಟುಂಬಗಳು ಒಂದೇ ಎಂದು ರಿಫಿಲ್ ಲಭ್ಯವಾಗಿಲ್ಲ. ಇದು ಮೋದಿ ಸರ್ಕಾರದ ಲೂಟಿಯಲ್ಲವೇ?'
'ಕೊನೆಯದಾಗಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ಯುಪಿಎ ಅವಧಿಯಲ್ಲಿನ ಹಣದುಬ್ಬದರ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದರು. ಆದರೆ ಮೋದಿ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶೀಯ ಎಲ್ಪಿಜಿ ಬೆಲೆಯನ್ನು ₹530 ಹೆಚ್ಚಿಸಿರುವುದು ನಿಜವಲ್ಲವೇ? ಹೀಗಿರುವಾಗ ಬಿಜೆಪಿ ನಾಯಕರು ಈಗ ಯಾಕೆ ಸಿಲಿಂಡರ್ ಹಿಡಿದುಕೊಂಡು ಬೀದಿಗಿಳಿಯುತ್ತಿಲ್ಲ' ಎಂದು ಪ್ರಶ್ನಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ